ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್‌ನಲ್ಲಿ ಉ.ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಚಿವ ಶಿವಶಂಕರ ರೆಡ್ಡಿ

By Manjunatha
|
Google Oneindia Kannada News

ಬೆಳಗಾವಿ, ಜುಲೈ 07: ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಎಂದು ಮೈತ್ರಿ ಸರ್ಕಾರದ ಕೃಷಿ ಸಚಿವ ಎನ್‌.ಎಚ್.ಶಿವಶಂಕರ ರೆಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡಿರುವ ಲಾಭ ಕೇವಲ ರಾಮನಗರ, ಹಾಸನ, ಮಂಡ್ಯ ಜಿಲ್ಲೆಗೆ ಮಾತ್ರ ಸಿಗುವುದಿಲ್ಲ ಅದರ ಲಾಭ ಹೆಚ್ಚಾಗಿ ದೊರಕುವುದು ಉತ್ತರ ಕರ್ನಾಟಕದ ರೈತರಿಗೆ ಎಂದು ಅವರು ಹೇಳಿದ್ದಾರೆ.

ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಸಂಸದ ಡಿ.ಕೆ.ಸುರೇಶ್ ಅಸಮಾಧಾನ

ಎಚ್‌.ಕೆ.ಪಾಟೀಲರ ಮಾತನ್ನೇ ದೊಡ್ಡದು ಮಾಡಿ ವಿರೋಧ ಪಕ್ಷಗಳು ಮುಂದಿಡುತ್ತಿವೆ. ಹಾಗೇನಾದರೂ ಉ.ಕರ್ನಟಕಕ್ಕೆ ಅನ್ಯಾಯವಾಗಿದ್ದಲ್ಲಿ ಪೂರಕ ಬಜೆಟ್‌ನಲ್ಲಿ ಸರಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.

It is not unfair budget to Uttar karnataka: Shivashankar Reddy

ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಅನ್ಯಾಯವಾಗಿದೆ ಎಂದು ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಬಿಜೆಪಿ ಈ ಕುರಿತು ಪ್ರತಿಭಟನೆಯನ್ನೂ ಮಾಡಿತ್ತು.

ಕಾಂಗ್ರೆಸ್ ಹಿರಿಯ ಶಾಸಕ ಎಚ್‌.ಕೆ.ಪಾಟೀಲ್ ಸಹ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಸೊಲ್ಲೆತ್ತಿದ್ದರು. ಈ ಬಗ್ಗೆ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೂ ಪತ್ರ ಬರೆದಿದ್ದರು.

English summary
Agriculture minister Shivashankar Reddy said it is not a unfair budget to Uttar Karnataka. Farmer loan waive off scheme will help North Karanataka people the most more than Ramanagara or Hassan district farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X