ವಿಧಾನಪರಿಷತ್ ಉಪಸಭಾಪತಿಯಾಗಿ ಜೆಡಿಎಸ್ನ ಧರ್ಮೇಗೌಡ ಆಯ್ಕೆ ಖಚಿತ
ಬೆಳಗಾವಿ, ಡಿಸೆಂಬರ್ 18: ವಿಧಾನಪರಿಷತ್ನ ಉಪಸಭಾಪತಿ ಆಗಿ ಜೆಡಿಎಸ್ನ ಧರ್ಮೇಗೌಡ ಅವರು ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ಜೆಡಿಎಸ್ನ ಧರ್ಮೇಗೌಡ ಅವರು ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿತ್ತು. ಧರ್ಮೇಗೌಡ ಹೊರತು ಪಡಿಸಿ ಇನ್ಯಾರು ನಾಮಪತ್ರ ಸಲ್ಲಿಸಿಲ್ಲ.
ಧರ್ಮೇಗೌಡ ಅವರಿಗೆ ಜೆಡಿಎಸ್ನ ಭೋಜೇಗೌಡ, ಶ್ರೀಕಂಠೇಗೌಡ, ಅಪ್ಪಾಜಿಗೌಡ, ಬಸವರಾಜ್ ಹೊರಟ್ಟಿ ಅವರು ಸೂಚಕರಾಗಿದ್ದರು. ಧರ್ಮೇಗೌಡ ಹೊರತು ಪಡಿಸಿ ಇನ್ಯಾರು ನಾಮಪತ್ರ ಹಾಕಿಲ್ಲವಾದ್ದರಿಂದ ಅವರು ಅವಿರೋಧವಾಗಿ ಉಪಸಭಾಪತಿಯಾಗಿ ಆಯ್ಕೆ ಆಗಲಿದ್ದಾರೆ.

ಈ ಹಿಂದೆ ಉಪಸಭಾಪತಿ ಸ್ಥಾನಕ್ಕೆ ಶ್ರೀಕಂಠೇಗೌಡ, ಅಪ್ಪಾಜಿಗೌಡ ಹಾಗೂ ಮರಿತಿಬ್ಬೇಗೌಡ ಅವರ ಹೆಸರುಗಳು ಕೇಳಿಬಂದಿದ್ದವು. ಈ ಮೂವರಲ್ಲಿ ಯಾರನ್ನೇ ಉಪಸಭಾಪತಿ ಮಾಡಿದರೆ ಅಸಮಾಧಾನ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಧರ್ಮೇಗೌಡರನ್ನು ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನಿಸಿದೆ.
ಧರ್ಮೇಗೌಡ ಅವರು ನಾಮಪತ್ರ ಸಲ್ಲಿಸಿದ ಬಳಿಕ ಬಸವರಾಜ ಹೊರಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಹೀಗೆ ಕೊನೆ ಕ್ಷಣದ ಬದಲಾವಣೆ ಆಗುತ್ತಲೇ ಇರುತ್ತವೆ. ಸಭಾಪತಿ ಸ್ಥಾನಕ್ಕೆ ನನ್ನ ಹೆಸರು ಇತ್ತು ಆದರೆ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸ್ಥಾನ ಒಲಿಯಿತು. ಈಗ ಅಪ್ಪಾಜಿಗೌಡ ಹಾಗೂ ಮರಿತಿಬ್ಬೇಗೌಡ ಅವರ ಹೆಸರುಗಳು ಕೇಳಿಬಂದಿತ್ತು ಆದರೆ ಧರ್ಮೇಗೌಡ ಅವರಿಗೆ ಸ್ಥಾನ ಒಲಿದಿದೆ ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications