ವಿಧಾನಪರಿಷತ್ ಉಪಸಭಾಪತಿಯಾಗಿ ಜೆಡಿಎಸ್ನ ಧರ್ಮೇಗೌಡ ಆಯ್ಕೆ ಖಚಿತ
ಬೆಳಗಾವಿ, ಡಿಸೆಂಬರ್ 18: ವಿಧಾನಪರಿಷತ್ನ ಉಪಸಭಾಪತಿ ಆಗಿ ಜೆಡಿಎಸ್ನ ಧರ್ಮೇಗೌಡ ಅವರು ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ಜೆಡಿಎಸ್ನ ಧರ್ಮೇಗೌಡ ಅವರು ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿತ್ತು. ಧರ್ಮೇಗೌಡ ಹೊರತು ಪಡಿಸಿ ಇನ್ಯಾರು ನಾಮಪತ್ರ ಸಲ್ಲಿಸಿಲ್ಲ.
ಧರ್ಮೇಗೌಡ ಅವರಿಗೆ ಜೆಡಿಎಸ್ನ ಭೋಜೇಗೌಡ, ಶ್ರೀಕಂಠೇಗೌಡ, ಅಪ್ಪಾಜಿಗೌಡ, ಬಸವರಾಜ್ ಹೊರಟ್ಟಿ ಅವರು ಸೂಚಕರಾಗಿದ್ದರು. ಧರ್ಮೇಗೌಡ ಹೊರತು ಪಡಿಸಿ ಇನ್ಯಾರು ನಾಮಪತ್ರ ಹಾಕಿಲ್ಲವಾದ್ದರಿಂದ ಅವರು ಅವಿರೋಧವಾಗಿ ಉಪಸಭಾಪತಿಯಾಗಿ ಆಯ್ಕೆ ಆಗಲಿದ್ದಾರೆ.

ಈ ಹಿಂದೆ ಉಪಸಭಾಪತಿ ಸ್ಥಾನಕ್ಕೆ ಶ್ರೀಕಂಠೇಗೌಡ, ಅಪ್ಪಾಜಿಗೌಡ ಹಾಗೂ ಮರಿತಿಬ್ಬೇಗೌಡ ಅವರ ಹೆಸರುಗಳು ಕೇಳಿಬಂದಿದ್ದವು. ಈ ಮೂವರಲ್ಲಿ ಯಾರನ್ನೇ ಉಪಸಭಾಪತಿ ಮಾಡಿದರೆ ಅಸಮಾಧಾನ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಧರ್ಮೇಗೌಡರನ್ನು ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನಿಸಿದೆ.
ಧರ್ಮೇಗೌಡ ಅವರು ನಾಮಪತ್ರ ಸಲ್ಲಿಸಿದ ಬಳಿಕ ಬಸವರಾಜ ಹೊರಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಹೀಗೆ ಕೊನೆ ಕ್ಷಣದ ಬದಲಾವಣೆ ಆಗುತ್ತಲೇ ಇರುತ್ತವೆ. ಸಭಾಪತಿ ಸ್ಥಾನಕ್ಕೆ ನನ್ನ ಹೆಸರು ಇತ್ತು ಆದರೆ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಸ್ಥಾನ ಒಲಿಯಿತು. ಈಗ ಅಪ್ಪಾಜಿಗೌಡ ಹಾಗೂ ಮರಿತಿಬ್ಬೇಗೌಡ ಅವರ ಹೆಸರುಗಳು ಕೇಳಿಬಂದಿತ್ತು ಆದರೆ ಧರ್ಮೇಗೌಡ ಅವರಿಗೆ ಸ್ಥಾನ ಒಲಿದಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications