ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಕನ್ನಡ ಧ್ವಜ ವಿವಾದ; ಕುಮಾರಸ್ವಾಮಿ ಟ್ವೀಟ್

|
Google Oneindia Kannada News

ಬೆಳಗಾವಿ, ಜನವರಿ 05: ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಕನ್ನಡ ಧ್ವಜವನ್ನು ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ. "ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ" ಎಂದು ಹೇಳಿದ್ದಾರೆ.

ಕನ್ನಡ ಧ್ವಜಸ್ತಂಭ ತೆರವಿಗೆ ಗಡುವು ಕೊಟ್ಟ ಎಂಇಎಸ್ಕನ್ನಡ ಧ್ವಜಸ್ತಂಭ ತೆರವಿಗೆ ಗಡುವು ಕೊಟ್ಟ ಎಂಇಎಸ್

"ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ; ಬೆಳಗಾವಿಯಲ್ಲಿ ಹೈಡ್ರಾಮಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ; ಬೆಳಗಾವಿಯಲ್ಲಿ ಹೈಡ್ರಾಮ

Kannada Flag Issue HD Kumaraswamy Tweet

"ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ 'ಕನ್ನಡಿಗರಿಗೆ ಸರ್ಕಾರ ಹೆದರಬಾರದು' ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಮುಚ್ಚುವ ಹುನ್ನಾರ?ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಮುಚ್ಚುವ ಹುನ್ನಾರ?

ಡಿಸೆಂಬರ್ 28ರಂದು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಏಕಾಏಕಿ ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಿದರು.

ಪೊಲೀಸರು ಕನ್ನಡ ಧ್ವಜ ಸ್ತಂಭವನ್ನು ಸ್ಥಾಪನೆ ಮಾಡದಂತೆ ತಡೆಯಲು ಪ್ರಯತ್ನ ನಡೆಸಿದರು. ಎಂಇಎಸ್ ಕಾರ್ಯಕರ್ತರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

English summary
Former chief minister H. D. Kumaraswamy tweet about issue of Kannada flag in-front of Belgaum City Corporation office. Kannada activist's installed flag poll on December 28 and MES opposing it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X