Belagavi: ಕನ್ನಡ ರಾಜ್ಯೋತ್ಸವದಂದೇ MES ಕರಾಳ ದಿನಾಚರಣೆಗೆ ಸಜ್ಜು, ಡಿಸಿ ಕೊಟ್ಟ ಎಚ್ಚರಿಕೆಯೇನು?
ಬೆಳಗಾವಿ, ಅಕ್ಟೋಬರ್ 29: ಕರ್ನಾಟಕದ ಬೆಳಗಾವಿ ಗಡಿ ಭಾಗದಲ್ಲಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟ ಮತ್ತೆ ಮುಂದುವರಿದಿದೆ. ಆಗಾಗ ಖ್ಯಾತೆ ತೆಗೆಯುವ ಎಂಇಎಸ್ ನವೆಂಬರ್ 1ರಂದು ಕರಾಳ ದಿನಾಚರಣೆ ಆಚರಿಸಲು ಸಜ್ಜಾಗಿದೆ. ಇದಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೆಲ್ಲ ನೋಡಿದರೆ ಗಡಿ ವಿವಾದ ಮತ್ತೆ ಭುಗಿಲೇಳುವ ಲಕ್ಷಣಗಳು ಕಂಡು ಬರುತ್ತಿವೆ.
ರಾಜ್ಯದ ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ನವೆಂಬರ್ 1ರಂದು ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ತಯಾರಿ ನಡೆದಿದೆ. ಇತ್ತ ಕರಾಳ ದಿನಾಚರಣೆ ಎಂಬಿಎಸ್ ಸಜ್ಜಾಗುವ ಮೂಲಕ ಮತ್ತೆ ಖ್ಯಾತೆ ಆರಂಭಿಸಲು ಯತ್ನಿಸುತ್ತಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತನ್ನ ಸರ್ಕಾರದ ಪ್ರತಿನಿಧಿಗಳನ್ನು ಕರಾಳ ದಿನಾಚರಣೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದು ವರದಿ ಆಗಿದೆ.

ಇದೆಲ್ಲ ಬೆಳವಣಿಗೆ ಗಮನಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಸತೀಶ್ ಪಾಟೀಲ್ ಅವರು ಕರಾಳ ದಿನಾಚರಣೆ ಮಾಡದಂತೆ ಎಂಇಎಸ್ಗೆ ಎಚ್ಚರಿಕೆ ನೀಡಿದ್ದಲ್ಲದೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಕರಾಳ ದಿನಾಚರಣೆ ಆಚರಿಸಿದ್ದೇ ಆದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ವಹಿಸುವಂತೆ ನಿರ್ದೇಶಿಸಲಾಗಿದೆ. ಜೊತೆಗೆ ಮಹಾರಾಷ್ಟ್ರ ರಾಜ್ಯ ನಾಯಕರು ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.
ಎಂಇಎಸ್ ಪುಂಡರಿಂದ ಪದೇ ಪದೆ ಖ್ಯಾತೆ
ಎಂಇಎಸ್ ಪುಂಡರು ಬೆಳಗಾವಿ ಗಡಿ ವಿವಾದವನ್ನು ಸದಾ ಜೀವಂತ ಇಡಲು ಪ್ರಯತ್ನಿಸಿದಂತೆ ಅವರ ವರ್ತನೆ. ಇತ್ತೀಚೆಗೆ ಧ್ವಜ ಸ್ತಂಭ ಕಿತ್ತು ಪುಂಡಾಟಿಕೆ ಮೆರೆದಿದ್ದರು. ಪ್ರತಿ ಬಾರಿ ರಾಜ್ಯೋತ್ಸವ ವೇಳೆಯು ಕರಾಳ ದಿನಾಚರಣೆಗೆ ಮುಂದಾದಂತೆ ಈ ಬಾರಿಯು ನಿರ್ಧರಿಸಿದ್ದಾರೆ. ಇಂತವರಿಗೆ ಮಹಾ ಸಿಎಂ ಸಿಂಧೆ ಬೆಂಬಲ ವ್ಯಕ್ತಪಡಿಸಿದ್ದೇ ತಡ ನಮ್ಮನ್ನು ತಡೆಯೋರೆ ಇಲ್ಲ ಎಂಬಂತ ಸ್ಥಿತಿ ಎಂಇಎಸ್ ಸದಸ್ಯರು ತಲುಪಿದ್ದಾರೆ. ಇದರಿಂದ ಗಡಿ ಭಾಗದ ನಾಗರಿಕರಿಗೆ ಶಾಂತಿ, ನೆಮ್ಮದಿ ಇಲ್ಲದಾಗಿದೆ.
ಸದರಿ ಕರಾಳ ದಿನಾಚರಣೆ ಸಂಬಂಧ ಬೆಳಗಾವಿ ಒಳಗೆ ಸಂಸದ ಧೈರ್ಯಶೀಲ ಮಾನೆ, ಮಹಾರಾಷ್ಟ್ರದ ಗಡಿ ಉಸ್ತುವಾರಿ ಸೇರಿದಂತೆ ಸಚಿವರನ್ನು ಕರೆತರಲು ಎಂಇಎಸ್ ಯೋಜಿಸಿದೆ. ಈ ಮೂಲಕ ಕರ್ನಾಟಕ ವಿರುದ್ಧದ ನೀತಿ ಅನುಸರಿಸಲಿದ್ದಾರೆ.
ಇನ್ನೂ ಗಡಿ ಭಾಗದಲ್ಲಿ ಮಹಾರಾಷ್ಟ್ರ ಸರ್ಕಾರವು ಕಚೇರಿ ಆರಂಭಕ್ಕೆ ಕೈಹಾಕಿದೆ. ಈ ನಿರ್ಧಾರವು ಮರಾಠಿಗರನ್ನು ಪ್ರಚೋದಿಸಿದಂತಾಗುತ್ತದೆ. ಗಡಿಯಲ್ಲಿ ಇಂತಹ ಬೆಳವಣಿಗೆಗಳಿಗೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications