Get Updates
Get notified of breaking news, exclusive insights, and must-see stories!

Athani Constituency: ಆಪ್ತನಿಗೆ ಟಿಕೆಟ್‌ ನೀಡದಿದ್ದರೆ ಜಾರಕಿಹೊಳಿ ಬಂಡಾಯ, ಅಥಣಿ ಬಿಡಲ್ಲವೆಂದ ಸವದಿ ಮಗ- ಇದು BJP Vs BJP ಕದನ

ಲಿಂಗಾಯತರೇ ಅಧಿಕವಾಗಿರುವ ಅಥಣಿ ತಾಲ್ಲೂಕಿನಲ್ಲಿ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ. ವರದಿ, ವಿಶ್ಲೇಷಣೆ ಓದಿ

ಬೆಳಗಾವಿ, ಮಾರ್ಚ್‌ 13: ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರವೂ ಒಂದು. ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಪೈಪೋಟಿ ಇದೆ. 2004ಕ್ಕೂ ಮೊದಲು ಈ ಕ್ಷೇತ್ರವು ಕಾಂಗ್ರೆಸ್‌ ಹಾಗೂ ಜನತಾ ಪರಿವಾರದ ನಡುವಿನ ಜಿದ್ದಾಜಿದ್ದಿಯ ಕಣವಾಗಿತ್ತು. ಆ ನಂತರ ಬಿಜೆಪಿ ತನ್ನ ನೆಲೆಯನ್ನು ಈ ಕ್ಷೇತ್ರದಲ್ಲಿ ಕಂಡುಕೊಳ್ಳುವಲ್ಲಿ ಸಫಲವಾಯಿತು. ಲಿಂಗಾಯತರೇ ಅಧಿಕವಾಗಿರುವ ಅಥಣಿ ತಾಲ್ಲೂಕಿನಲ್ಲಿ ಈ ಬಾರಿಯೂ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಡುವ ಸಾಧ್ಯತೆಗಳು ಹೆಚ್ಚಿವೆ.

 ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಥಣಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಥಣಿ

ಅಥಣಿ ವಿಧಾನ ಸಭಾ ಕ್ಷೇತ್ರವು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಚಿಕ್ಕೋಡಿ ಲೋಕಸಭೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಅಥಣಿಯೂ ಒಂದು. 2004 ರಿಂದ 2018ರ ವರೆಗೂ ಈ ಕ್ಷೇತ್ರವನ್ನು ಬಿಜೆಪಿ ಪ್ರತಿನಿಧಿಸಿದೆ. ಸಚಿವ ಲಕ್ಷ್ಮಣ ಸವದಿ ಅವರು ಈ ಕ್ಷೇತ್ರದಲ್ಲಿ ಸತತ ಮೂರು ಭಾರಿ ಜಯಗಳಿಸಿದ್ದಾರೆ. ಅವರು ಪ್ರಸ್ತುತ ವಿಧಾನ ಪರಿಷತ್‌ ಸದಸ್ಯರಾಗಿದ್ದು, ಬೊಮ್ಮಾಯಿ ನೇತೃತ್ವದ ಸರ್ಕರದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎಸ್‌ ಯಡಿಯೂರಪ್ಪನವರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

 2018ರಲ್ಲಿ ಕಾಂಗ್ರೆಸ್‌- ಬಿಜೆಪಿ ನಡುವೆ ಹಣಾಹಣಿ

2018ರಲ್ಲಿ ಕಾಂಗ್ರೆಸ್‌- ಬಿಜೆಪಿ ನಡುವೆ ಹಣಾಹಣಿ

2018 ರಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿಯ ಲಕ್ಷ್ಮಣ ಸವದಿ ಹಾಗೂ ಕಾಂಗ್ರೆಸ್‌ ಪಕ್ಷದ ಮಹೇಶ ಕುಮಟಳ್ಳಿ ನಡುವೆ ನೇರ ಸ್ಪರ್ಧೆ ಉಂಟಾಗಿತ್ತು. ಮಹೇಶ ಕುಮಟಳ್ಳಿ ಅವರು 2,331 ಮತಗಳ ಅಂತರದಿಂದ ಜಯಗಳಿಸಿದ್ದರು.

 ರಮೇಶ್‌ ಆಪ್ತ ಕುಮಟಳ್ಳಿ ಬಿಜೆಪಿ ಸೇರ್ಪಡೆ

ರಮೇಶ್‌ ಆಪ್ತ ಕುಮಟಳ್ಳಿ ಬಿಜೆಪಿ ಸೇರ್ಪಡೆ

2019 ರಲ್ಲಿ ಮಹೇಶ ಕುಮಟಳ್ಳಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಜೊತೆಗೆ ಬಿಜೆಪಿ ಸೇರ್ಪಡೆಯಾದರು. ಅಂದಿನ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌- ಕಾಂಗ್ರೆಸ್‌ ಸರ್ಕಾರದ ಪತನಕ್ಕೆ ರಮೇಶ ಜಾರಕಿಹೊಳಿ ತಂಡವು ನೇರ ಹೊಣೆಯಾಗಿದೆ. ಕುಮಟಳ್ಳಿ ಅವರು ಜಾರಕಿಹೊಳಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

 ಬಿಜೆಪಿ ಟಿಕೆಟ್‌ಗಾಗಿ ಭಾರೀ ಪೈಪೋಟಿ

ಬಿಜೆಪಿ ಟಿಕೆಟ್‌ಗಾಗಿ ಭಾರೀ ಪೈಪೋಟಿ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಬಿಜೆಪಿ ಟಿಕೆಟ್‌ಗಾಗಿ ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಮಹೇಶ ಕುಮಟಳ್ಳಿ ನಡುಗೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಹೇಶ ಕುಮಟಳ್ಳಿಗೆ ಬಿಜೆಪಿ ಟಿಕೆಟ್‌ ನೀಡದಿದ್ದರೆ, ಗೋಕಾಕದ ಪ್ರಭಾವಿ ಸಚಿವ ರಮೇಶ ಜಾರಕಿಹೊಳಿ ಬಂಡಾಯ ಏಳುವ ಸಾಧ್ಯತೆ ಹೆಚ್ಚಿದೆ. ಅತ್ತ ಲಕ್ಷ್ಮಣ ಸವದಿ ಅವರು ಟಿಕೆಟ್‌ಗಾಗಿ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಅಥಣಿ ಟಿಕೆಟ್‌ ಅನ್ನು ಬಿಟ್ಟು ಕೊಡಲ್ಲ ಎಂದು ಲಕ್ಷ್ಮಣ ಸವದಿ ಅವರ ಪುತ್ರ ಬಹಿರಂಗವಾಗಿಯೇ ಹೇಳಿದ್ದಾರೆ. ಈ ಹೇಳಿಕೆಯಿಂದ ರಮೇಶ ಜಾರಕಿಹೊಳಿ ಕೆರಳಿದ್ದಾರೆ ಎನ್ನಲಾಗಿದೆ. ಕುಮಟಳ್ಳಿಗೆ ಟಿಕೆಟ್‌ ನೀಡದೇ ಹೋದರೆ, ನಾನು ಸ್ಪರ್ಧಿಸುವುದಿಲ್ಲ ಎನ್ನುವ ಮಾತನ್ನೂ ರಮೇಶ ಜಾರಿಕಿಹೊಳಿ ಹೇಳಿರುವುದು ಬಿಜೆಪಿಗೆ ಹಿನ್ನಡೆ ಮಾಡಲಿದೆ.

 ಕಾಂಗ್ರೆಸ್‌ ಟಿಕೆಟ್‌ಗೆ ಹಲವು ಆಕಾಂಕ್ಷಿಗಳು

ಕಾಂಗ್ರೆಸ್‌ ಟಿಕೆಟ್‌ಗೆ ಹಲವು ಆಕಾಂಕ್ಷಿಗಳು

ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲದೇ ಕಾಂಗ್ರೆಸ್‌ ಟಿಕೆಟ್‌ಗಾಗಿಯೂ ತೀವ್ರ ಹಣಾಹಣಿ ಏರ್ಪಟಿದೆ. ಅಥಣಿ ಕ್ಷೇತ್ರದ ಟಿಕೆಟ್‌ಗಾಗಿ 13 ಜನರು ಅರ್ಜಿಗಳನ್ನು ಹಾಕಿದ್ದಾರೆ. ಅರ್ಜಿ ಹಾಕಿದ 13 ಜನರಲ್ಲಿ ನಾಲ್ಕು ಮುಖಂಡರನ್ನು ಕಾಂಗ್ರೆಸ್‌ ಸ್ಕ್ರೀನಿಂಗ್‌ ಕಮಿಟಿ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಎಸ್ ಕೆ ಭೂತಾಳೆ, ಧರೆಪ್ಪ ಟಕ್ಕಣ್ಣವರ, ಗಜಾನನ ಮಂಗಸೂಳಿ ಮತ್ತು ಬಸವರಾಜ ಭೂತಾಳೆ ಅವರನ್ನು ಆಯ್ಕೆ ಮಾಡಲಾಗಿರುವುದು ಗೊತ್ತಾಗಿದೆ.

 ಸತೀಶ್‌ ಜಾರಕಿಹೊಳಿ ಆಪ್ತನಿಗೆ ಟಿಕೆಟ್‌?

ಸತೀಶ್‌ ಜಾರಕಿಹೊಳಿ ಆಪ್ತನಿಗೆ ಟಿಕೆಟ್‌?

ಈ ನಾಲ್ವರಲ್ಲಿ ಎಸ್‌ ಕೆ ಭೂತಾಳೆ ಅವರಿಗೆ ಟಿಕೆಟ್‌ ದೊರೆಯುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ಹೇಳಿವೆ. ಕಾರಣ, ಭೂತಾಳೆ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹತ್ತಿರವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಜಾತಿ ಆಧಾರದಲ್ಲಿ ನೋಡುವುದಾದರೆ, ಪಂಚಮಸಾಲಿ ಲಿಂಗಾಯತರ ಬೆಂಬಲ ಹೊಂದಿರುವ ಧರೆಪ್ಪ ಟಕ್ಕಣ್ಣನವರ್ ಅವರಿಗೂ ಟಿಕೆಟ್‌ ದೊರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+