ಯಡಿಯೂರಪ್ಪ ನಿರ್ಲಕ್ಷಿಸಿದರೆ ಬಿಜೆಪಿ ದಿವಾಳಿ: ಕೆಜೆಪಿ ಅಧ್ಯಕ್ಷ ಎಚ್ಚರಿಕೆ
ಬೆಳಗಾವಿ, ಅಕ್ಟೋಬರ್ 5: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೇಂದ್ರ ಸರ್ಕಾರವು ಕಡೆಗಣಿಸಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುತ್ತದೆ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರ ಸರ್ಕಾರವು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದೆ. ಇದೇ ರೀತಿ ಕೇಂದ್ರದ ಧೋರಣೆ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.
ಭೀಕರ ಮಳೆ ಮತ್ತು ಪ್ರವಾಹದಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗಿವೆ. ನೆರೆಯಿಂದಾಗಿ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ. ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅವರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದರು.

ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಅವರೇ ಹೇಳಿಕೆ ನೀಡಿರುವುದು ದುರ್ದೈವದ ಸಂಗತಿ. ಇಷ್ಟೆಲ್ಲ ಅನಾಹುತಗಳು ಸಂಭವಿಸಿದ್ದರೂ ಕೇಂದ್ರ ಸರ್ಕಾರ 1,200 ಕೋಟಿ ರೂ. ಪರಿಹಾರ ನೀಡಿರುವುದು ಮೂಗಿಗೆ ತುಪ್ಪ ಸವರಿದಂತಾಗಿದೆಯಷ್ಟೇ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೆರೆ ಸಂತ್ರಸ್ತರ ಕುರಿತು ಮಾತನಾಡುವಾಗ ಅವರು ಭಾವುಕರಾದರು.
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರ ಪರಿಶ್ರಮವೇ ಕಾರಣ. ಅವರನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಬಾರದು. ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ. ಯಡಿಯೂರಪ್ಪ ಅವರು ಕೆಜೆಪಿಗೆ ಮರಳಿದರೂ ಸ್ವಾಗತಿಸುತ್ತೇನೆ ಎಂದು ಹೇಳಿದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications