Get Updates
Get notified of breaking news, exclusive insights, and must-see stories!

Breaking: ಸಚಿವ ಸಂಪುಟ ವಿಸ್ತರಣೆ- ಸಧ್ಯದಲ್ಲಿಯೇ ನವದೆಹಲಿಗೆ ಭೇಟಿ : ಸಿಎಂ ಬೊಮ್ಮಾಯಿ

ಬೆಳಗಾವಿ,ಅಕ್ಟೋಬರ್ 15: ಸಚಿವ ಸಂಪುಟ ವಿಸ್ತರಣೆಯ ಸಂಬಂಧ ಸದ್ಯದಲ್ಲಿಯೇ ನವದೆಹಲಿಗೆ ಭೇಟಿ ನೀಡಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಬೆಳಗಾವಿಯಲ್ಲಿ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.

Karnataka Cabinet expansion- visit to New Delhi soon- Basavaraj Bommai statement in Belagavi

ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು:

ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ.ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.

ಪ್ರಭಾಕರ ಕೋರೆಯವರು ಸ್ನೇಹಜೀವಿ:

ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರ ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+