ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ ₹75 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ಮುರುಗೇಶ್ ನಿರಾಣಿ
ಬೆಳಗಾವಿ, ಡಿಸೆಂಬರ್ 21: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್ಯ ಸರ್ಕಾರ 75 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಮಂಗಳವಾರ ಸದನಲ್ಲಿ ಕಾಂಗ್ರೆಸ್ ಎಂಎಲ್ಸಿಗಳ ಪ್ರಶ್ನಗೆ ಉತ್ತರಿಸಿದ ಅವರು, 'ಇನ್ವೆಸ್ಟ್ ಕರ್ನಾಟಕ-2022' ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ 9.81 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನು ಸ್ವೀಕರಿಸಲಾಗಿದೆ. ಹೂಡಿಕೆದಾರರ ಸಮಾವೇಶ ಆಯೋಜನೆಗೆ 75 ಕೋಟಿ ರೂಪಾಯಿ ವ್ಯಯಿಸಲಾಗಿದೆ ಎಂದು ಹೇಳಿದರು.
ನವೆಂಬರ್ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9,81, 784 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಬಗ್ಗೆ ವಿವಿಧ ಯೋಜನೆಗಳ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಜಪಾನ್, ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ ಹಾಗೂ ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳ 15,000 ಪ್ರತಿನಿಧಿಗಳು ಹಾಗೂ ಸುಪ್ರಸಿದ್ಧ ಕಂಪನಿಯ ಸಿಇಓ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಇನ್ವೆಸ್ಟ್ ಕರ್ನಾಟಕದಲ್ಲಿ ಪ್ರಮುಖವಾಗಿ 57 ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದ್ದಾರೆ.

ಇನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ತೂಕ ಮಾಡುವಾಗ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ಸದಸ್ಯರಿಗೆ ಉತ್ತರಿಸಿದ ಸಚಿವ ಮುರುಗೇಶ್ ನಿರಾಣಿ, ಎಥೆನಾಲ್ ಹಾಗೂ ಸಕ್ಕರೆ ಉತ್ಪಾದನೆ ಬೆಲೆ, ಆದಾಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಇದೆ. ಕಬ್ಬು ತೂಕದಲ್ಲಿ ಯಾವುದೇ ಮೋಸ ಆಗುತ್ತಿಲ್ಲ. ಏಕೆಂದರೆ ಬೆಳೆಗಾರರು ಖಾಸಗಿಯಾಗಿಯೂ ತೂಕ ಮಾಡಿಸುತ್ತಾರೆ. ಹಾಗಾಗಿ, ಟನ್ ಗಟ್ಟಲೆ ಮೋಸ ಆಗುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
ಯುವಕರು ಸ್ವಯಂ ಉದ್ಯೋಗದಾತರಾಗಲು ನಡೆಸುತ್ತಿರುವ 'ಉದ್ಯಮಿಯಾಗ-ಉದ್ಯೋಗ ನೀಡು' ವಿಶೇಷ ಕಾರ್ಯಕ್ರಮವು ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.

ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ. ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ಗಂಟೆಯ ಆನ್ಲೈನ್ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ ಎಂದು ತಿಳಿಸಿದರು.h
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications