ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರಳು ಹಗರಣ ತನಿಖೆ ಕೊನೆಗೂ ಸಿಐಡಿ ಹೆಗಲಿಗೆ

By Kiran B Hegde
|
Google Oneindia Kannada News

ಬೆಳಗಾವಿ, ಡಿ. 18: ಮರಳು ಹಗರಣದ ತನಿಖೆಯನ್ನು ಕೊನೆಗೂ ಸಿಐಡಿಗೆ ಒಪ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಕುರಿತು ತೀವ್ರ ಚರ್ಚೆ ನಡೆಯಿತು.

ಅಕ್ರಮ ಸಾಗಣೆ ತಡೆಗಟ್ಟಲು ಸರ್ಕಾರ ದಿಟ್ಟ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಆದ್ದರಿಂದ ಈ ಕುರಿತು ಚರ್ಚಿಸಲು ಸ್ಪೀಕರ್ ಕೊಠಡಿಯಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ತೀವ್ರ ಚರ್ಚೆ ನಡೆದು ಕೊನೆಗೆ ಹಗರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿತು.

sand

ಸಮಿತಿ ರಚನೆಗೆ ನಿರ್ಧಾರ : ರಾಜ್ಯದಲ್ಲಿ ಎದ್ದಿರುವ ಮರಳು ವಿವಾದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಈ ಸಮಿತಿಯಲ್ಲಿ ಶಾಸಕರೂ ಇರಲಿದ್ದಾರೆ. ಸಮಿತಿಯು ಸಲ್ಲಿಸುವ ವರದಿಯನ್ನು ಆಧರಿಸಿ ನೂತನ ಮರಳು ನೀತಿ ರಚಿಸುವ ಕುರಿತು ಚಿಂತಿಸಲಾಗುವುದು. ಈ ಸಮಿತಿಗೆ ಸದಸ್ಯರನ್ನು ಶೀಘ್ರ ನೇಮಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಮರಳು ಸರಬರಾಜು, ಅಕ್ರಮ ಸಾಗಣೆ ಹಾಗೂ ಈ ಕುರಿತು ದಾಖಲಾಗಿರುವ ದೂರುಗಳ ಕುರಿತು ಕಾನೂನು ಸಚಿವ ಟಿ.ಬಿ. ಜಯಚಂದ್ರ ಸುದೀರ್ಘ ವಿವರಣೆ ನೀಡಿದರು.

English summary
Karnataka government has taken the decision to hand over the investigation of sand scam to CID in winter session held in Belagavi. A committee will be formed comprising of MLAs to to study sand issues. Committee will submit a report which could be later incorporated as new law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X