Karnataka Rain: ಬೆಳಗಾವಿಯಲ್ಲಿ ಧಾರಾಕಾರ ಮಳೆಯಿಂದ ಜಲಾವೃತಗೊಂಡ ಸೇತುವೆ: ಜನಜೀವನ ಅಸ್ತವ್ಯಸ್ತ
ಬೆಳಗಾವಿ, ಸೆಪ್ಟೆಂಬರ್ 25: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಆಯ್ತು ಎನ್ನುವಷ್ಟರಲ್ಲೇ ಮತ್ತೆ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಜೋರಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿರಂತರ ಮಳೆಗೆ ಹಿರೇಬುದನೂರ ಗ್ರಾಮದಿಂದ ಚಿಕ್ಕಬುದನೂರ ಹೋಗುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಎರಡು ಗ್ರಾಮದ ಜನರಿಗೆ ಸಂಪರ್ಕಕ್ಕೆ ಒಂದೇ ಮಾರ್ಗವಾದ ಕಾರಣ ಜನರು ಜಲಾವೃತಗೊಂಡ ಸೇತುವೆಯಲ್ಲೇ ಚಲಿಸುವ ಹರಸಾಹಸಕ್ಕೆ ಮುಂದಾಗುತ್ತಿದ್ದಾರೆ. ಈ ವೇಳೆ ಅವಘಡವೊಂದು ನಡೆದಿದ್ದು, ಅದೃಷ್ಟವಶಾತ್ ಅಪಾಯಕ್ಕೆ ಸಿಲುಕಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಬುದನೂರ ಗ್ರಾಮದ ಬೀರಬಲ್ಲ ಡೊಳ್ಳಿ ಹಾಗೂ ನಿಂಗವ್ವ ದೇಗಾನಟ್ಟಿ ಎನ್ನುವವರು ಸಂಪೂರ್ಣ ಜಲಾವೃತಗೊಂಡ ಚಿಕ್ಕಬುದನೂರ ಹೋಗುವ ಸೇತುವೆಯಲ್ಲೇ ಅಪಾಯವನ್ನು ಲೆಕ್ಕಿಸದೇ ಬೈಕ್ನಲ್ಲಿ ಸೇತುವೆ ದಾಟಲು ಮುಂದಾಗಿದ್ದಾರೆ. ಈ ವೇಳೆ ಆಯತಪ್ಪಿ ಇಬ್ಬರು ನೀರಿಗೆ ಬಿದ್ದಿದ್ದು, ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಹಳ್ಳದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಸಹೋದರ, ಸಹೋದರಿಯನ್ನು ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಬೀರಬಲ್ಲ ಡೊಳ್ಳಿ ಹಾಗೂ ನಿಂಗವ್ವ ದೇಗಾನಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಭಾರೀ ಮಳೆಗೆ ಉಕ್ಕಿ ಹರಿದ ಹಳ್ಳ: ಪ್ರವಾಹ ನಡುವೆ ಸಿಲುಕಿದ ಶಾಲಾ ವಿದ್ಯಾರ್ಥಿಗಳು
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ನವಲಗುಂದದಲ್ಲಿ ಹಳ್ಳ ಉಕ್ಕಿ ಹರಿದ ಪರಿಣಾಮ ಮಕ್ಕಳು ಶಾಲೆಯಲ್ಲೇ ಸಿಲುಕಿಕೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ-ಇಬ್ರಾಹಿಂಪುರ ನಡುವಿನ ಎಸ್.ಎಸ್. ಬಾಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಾಲೆ ಎರಡು ಹಳ್ಳಗಳ ಮಧ್ಯೆಯಿದ್ದು, ಏಕಾಏಕಿ ನೀರು ನುಗ್ಗಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆವರಿಸಿಕೊಂಡಿದೆ.
ಶಾಲೆ ಮುಗಿದರೂ ವಿದ್ಯಾರ್ಥಿಗಳು ಮನೆಗೆ ತೆರಳಲಾರದೆ ಶಾಲೆಯಲ್ಲಿಯೇ ಉಳಿದುಕೊಂಡರು. ಎರಡು ಗಂಟೆಗಳ ಬಳಿಕ ಹಳ್ಳದ ನೀರು ಕಡಿಮೆಯಾಗದ ಕಾರಣ ಕೊನೆಗೆ ಸ್ಥಳೀಯರು ಟ್ರ್ಯಾಕ್ಟರ್ ಸಹಾಯದಿಂದ ಮಕ್ಕಳನ್ನು ಶಾಲೆಯಿಂದ ಕರೆತಂದಿದ್ದಾರೆ. ಏಕಾಏಕಿ ಮಳೆ ಸುರಿದ ಕಾರಣ ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಜನರು ಆತಂಕದಲ್ಲಿದ್ದಾರೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications