ಬೆಳಗಾವಿ : ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಬೆಳಗಾವಿ, ನವೆಂಬರ್ 16 : ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ. ಹಲವು ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದು, ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಬೆಳಗಾವಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಖಡಕ್ ಗಲ್ಲಿಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆದಿದೆ. ಒಬ್ಬರು ಡಿಸಿಪಿ, ಒಬ್ಬರು ಎಸಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

Khadak Galli is tensed after stone pelting

2 ಪೊಲೀಸರ ಬೈಕ್‌ಗಳು ಸೇರಿ ಐದು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಲ್ಲು, ಇಟ್ಟಿಗೆ, ಗಾಜಿನ ಬಾಟಲಿಗಳನ್ನು ಎಸೆಯಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ಯಾರು, ಏಕೆ ಕಲ್ಲು ತೂರಾಟ ನಡೆಸಿದ್ದಾರೆ? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಲ್ಲು ತೂರಾಟ ನಡೆಸಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ನವೆಂಬರ್ 4ರಂದು ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಮುಸ್ಲಿಂ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದಿದ್ದರು. ಅಂದು ರಾತ್ರಿ ಸಹ ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+