ಕೈ ಕೊಟ್ಟ ಮೋದಿ, ತೃತೀಯ ರಂಗದತ್ತ ಯಡಿಯೂರಪ್ಪ
ಸುವರ್ಣ ಸೌಧ ಬೆಳಗಾವಿ, ನ.26: ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿರುವ ಸುವರ್ಣ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದೆ. ಶಾದಿಭಾಗ್ಯ ಯೋಜನೆ ವಿಸ್ತರಣೆ ಮತ್ತು ಎಪಿಎಲ್ ಕಾರ್ಡ್ ದಾರರಿಗೆ ಹಿಂದಿನಂತೆ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿರುವ ಯಡಿಯೂರಪ್ಪ ಅವರಿಗೆ ಈ ಸಂದರ್ಭದಲ್ಲಿ ಕೆಜೆಪಿ ಭವಿಷ್ಯದ ಬಗ್ಗೆ ಮಹತ್ವದ ಆಲೋಚನೆ ಬಂದಿದೆ.
ಬೆಂಗಳೂರಿನಲ್ಲಿ ಧರಣಿ ಅಂತ್ಯಗೊಳಿಸಿ ಬೆಳಗಾವಿಯಲ್ಲಿ ಧರಣಿ ಮುಂದುವರೆಸುವುದಾಗಿ ಘೋಷಿಸಿದ್ದ ಯಡಿಯೂರಪ್ಪ ಅವರು ತಮ್ಮ ಅನಾರೋಗ್ಯ, ವಯೋ ಸಹಜ ಸುಸ್ತು ಲೆಕ್ಕಿಸದೆ ಸರ್ಕಾರದ ವಿರುದ್ಧ ಧರಣಿ ಕೂತಿದ್ದಾರೆ. ಈ ಸಂದರ್ಭದಲ್ಲಿ ಕೆಜೆಪಿ ಅಸ್ತಿತ್ವ, ಮೋದಿ-ಬಿಜೆಪಿ ಕಡೆಯಿಂದ ಆದ ಅವಮಾನ, ಲೋಕಸಭೆ ಚುನಾವಣೆಗೂ ಮುನ್ನ ಕೆಜೆಪಿ ಭವಿಷ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ನಿರ್ಧಾರದ ಬಗ್ಗೆ ಒನ್ ಇಂಡಿಯಾ ಪ್ರತಿನಿಧಿ ಜತೆ ಕೆಲ ಕಾಲ ಮಾತನಾಡಿದ್ದಾರೆ.
ಮೋದಿ ಅವರ 'ಭಾರತ ಗೆಲ್ಲಿಸಿ' ಸಮಾವೇಶದ ಬಗ್ಗೆ ಇಲ್ಲಿ ತನಕ ಮಾತನಾಡದಿದ್ದ ಯಡಿಯೂರಪ್ಪ ಅವರು ಬಳಲಿಕೆಯಿಂದಲೋ ಏನೋ ಬಿಜೆಪಿ ಸಹವಾಸ ಸಾಕು ಎಂದಿದ್ದಾರೆ. ನರೇಂದ್ರ ಮೋದಿ ಅವರನ್ನು ನಾನು ಬೆಂಬಲಿಸುತ್ತಾ ಬಂದೆ ಆದರೆ, ಸಮಾವೇಶಕ್ಕೆ ಕನಿಷ್ಠ ಆಹ್ವಾನವೂ ಸಿಗಲಿಲ್ಲ. ವೇದಿಕೆಯಲ್ಲಿ ಬಿಜೆಪಿ ಗುಣಗಾನ ಮಾಡಿದರೂ ಯಡಿಯೂರಪ್ಪ ಹೆಸರು ಪ್ರಸ್ತಾಪವಾಗಲಿಲ್ಲ. ಬಿಜೆಪಿ-ಕೆಜೆಪಿ ವಿಲೀನ ಕಣ್ಣಾಮುಚ್ಚಾಲೆ ಆಟ ಸಾಕಾಗಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. [ಅಕ್ರಮ ಆಸ್ತಿ ಸುಳಿಯಲ್ಲಿ]

ಚುನಾವಣೆ ಬಗ್ಗೆ ಡಿಸೆಂಬರ್ 6 ರವರೆಗೂ ಮೈತ್ರಿ ಬಗ್ಗೆ ಎನ್ ಡಿಎನಿಂದ ಪ್ರತಿಕ್ರಿಯೆಗಾಗಿ ಕಾಯುತ್ತೇವೆ. ಎನ್ ಡಿಎಯಿಂದ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದರೆ ಮುಂದಿನ ನಿರ್ಧಾರ ಪ್ರಕಟಿಸುತ್ತೇವೆ. ಬಿಜೆಪಿ ಮೈತ್ರಿಗೆ ಒಪ್ಪಿಗೆ ನೀಡದಿದ್ದರೆ, ಕೆಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.
ಶಿಕಾರಿಪುರದ ಯಡಿಯೂರಪ್ಪ ಅವರು ಈಗ 'ಅನಿಸುತದೆ ಯಾಕೋ ಇಂದು ಬಿಜೆಪಿ ಬೇಡ ಎಂದೂ ಗುನುಗುತ್ತಿದ್ದಾರೆ. ಬಿಜೆಪಿ ಸಖ್ಯ ಬೇಡ ಎಂದರೆ ಮುಂದಿನ ನಡೆ ಏನು? ಎಂದು ಪ್ರಶ್ನಿಸಿದರೆ, ತೃತೀಯ ರಂಗದತ್ತ[ ಸಮಾಜವಾದಿ ಪಕ್ಷ ಸೇರುವ ಸಾಧ್ಯತೆ?] ತಮ್ಮ ಚಿತ್ತ ಹರಿದಿದೆ ಎಂದಿದ್ದಾರೆ.
ಆದರೆ, ಯಾವ ರಂಗ ಸೇರಿದರೂ ಕರ್ನಾಟಕ ಜನತಾ ಪಕ್ಷ ತನ್ನ ಅಸ್ತಿತ್ವ, ಪ್ರತ್ಯೇಕತೆ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಓದುಗರೇ.. ಧರಣಿ ಮಾಡಿ ಆಯಾಸಗೊಂಡಿದ್ದ ಯಡಿಯೂರಪ್ಪ ಅವರು ಸಕ್ಕರೆ ಕಾಯಿಲೆ ಪೀಡಿತರಾಗಿದ್ದು ಜಲಬಾಧೆ ತೀರಿಸಿಕೊಳ್ಳಬೇಕಾದರೆ ಸದನದಿಂದ ಬಹುದೂರ ಹೋಗಬೇಕಾಗುತ್ತದೆ. ಜನಪ್ರತಿನಿಧಿಗಳಿಗೆ ಸೂಕ್ತ ಶೌಚಾಲಯ ವ್ಯವಸ್ಥೆಯನ್ನು ಸರ್ಕಾರ ಒದಗಿಸಿಲ್ಲ ಎಂಬ ದೂರು ದೂರದಿಂದ ಕೇಳಿ ಬರುತ್ತಿದೆ.
ಸಿದ್ದರಾಮಯ್ಯ ಮನವಿ: ಶಾದಿ ಭಾಗ್ಯ ಯೋಜನೆ ಹೊಸದಾಗಿ ಘೋಷಣೆ ಮಾಡಿರುವ ಕಾರ್ಯಕ್ರಮವಲ್ಲ. ಆಯವ್ಯಯದಲ್ಲಿ ಮಂಡಿಸಿ ಅಂಗೀಕರಿಸಿದ ಯೋಜನೆಯನ್ನು ಇದೀಗ ಅನುಷ್ಠಾನಕ್ಕೆ ತರುತ್ತಿದ್ದೇವೆ. ಸಂವಿಧಾನದ ಸದಾಶಯದಂತೆ ಅಲ್ಪಸಂಖ್ಯಾತ ವರ್ಗದ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕಲ್ಪಿಸಿ ಕೊಡುವ ಕಾರ್ಯಕ್ರಮವನ್ನು ಅಲ್ಪ ಸಂಖ್ಯಾತ ಇಲಾಖೆಯ ಮೂಲಕ ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯನ್ನು ಇತರೆ ವರ್ಗದ ಹೆಣ್ಣು ಮಕ್ಕಳಿಗೂ ವಿಸ್ತರಿಸಲು ಯಾವುದೇ ವಿರೋಧವಿಲ್ಲ. ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನದ ಮುನ್ನ ಸಾಧಕ-ಬಾಧಕಗಳ ಕುರಿತ ಸಮೀಕ್ಷೆ, ಸಮಾಲೋಚನೆ, ಚರ್ಚೆ ನಡೆಯಬೇಕಾಗಿದೆ. ನೀತಿ-ನಿರೂಪಣೆ ಮಾಡುವಾಗ ಆಗ್ರಹಿಸುವುದು ಸಹಜ. ತಮ್ಮ ನಿಲುವು ಹಾಗೂ ತಮ್ಮ ಧೋರಣೆ, ಒತ್ತಡ ಹೇರುವ ತಂತ್ರಗಾರಿಕೆ ಸರಿಯಲ್ಲ. ಈ ವಿಷಯದ ಮೇಲೆ ಸದನದಲ್ಲಿ ಚರ್ಚೆಗೂ ಸಿದ್ಧ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications