ಬೆಳಗಾವಿಯಲ್ಲಿ ಕ್ರೀಡಾ ಅಕಾಡೆಮಿ, ಕುಂಬ್ಳೆ ಮುಂದಾಳತ್ವ
ಬೆಳಗಾವಿ, ಫೆ. 6: ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮುೂಡಿಸಿರುವ ಕೆಎಲ್ಇ ಶಿಕ್ಷಣ ಸಂಸ್ಥೆ ಈಗ ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟಿದೆ. ವಿಶ್ವ ವಿಖ್ಯಾತ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಮುಂದಾಳತ್ವದಲ್ಲಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಮುಂದಾಗಿದೆ.
ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಡಾ. ಕೋರೆ ಈ ವಿಷಯ ತಿಳಿಸಿದ್ದಾರೆ.
ಕ್ರೀಡಾ ಅಕಾಡೆಮಿ ಸ್ಥಾಪಿಸುವಂತೆ ಸಲಹೆ ನೀಡಿದ್ದು ಅನಿಲ್ ಕುಂಬ್ಳೆ ಅವರು. ಅವರದ್ದೇ ಮುಂದಾಳತ್ವದಲ್ಲಿ ಅಕಾಡೆಮಿ ಸ್ಥಾಪಿಸಲಾಗುವುದು. ಕೆಎಲ್ಇ ಸಂಸ್ಥೆಯಲ್ಲಿ ಈಗಾಗಲೇ ಟೆನ್ನಿಸ್, ಈಜು, ಬ್ಯಾಡ್ಮಿಂಟನ್ ಸೇರಿದಂತೆ ಇತರ ಕ್ರೀಡೆಗಳ ಅಂಗಣಗಳು ಇವೆ ಎಂದು ತಿಳಿಸಿದ್ದಾರೆ.
ಕೆಎಲ್ಇ ಶತಮಾನೋತ್ಸವದ ಹಿನ್ನೆಲೆಯಲ್ಲಿ 18 ತಿಂಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅನಿಲ್ ಕುಂಬ್ಳೆ ಚಾಲನೆ ನೀಡಿದರು. ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ವಿಆರ್ಎಲ್ ಸಮೂಹದ ಆನಂದ ಸಂಕೇಶ್ವರ್ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಕ್ರಿಕೆಟ್ ಆಡಬೇಕೆಂದು ಅನಿಲ್ ಕುಂಬ್ಳೆ ಸಲಹೆ ನೀಡಿದರು. ಜೆಎನ್ಎಂಸಿಯಲ್ಲಿ ನನಗೆ ವೈದ್ಯಕೀಯ ಅಧ್ಯಯನಕ್ಕೆ ಸೀಟ್ ಸಿಕ್ಕಿತ್ತು. ಆದರೆ, ಕ್ರಿಕೆಟ್ ಕಾರಣದಿಂದ ಇಂಜಿನಿಯರಿಂಗ್ ಸೇರಿಕೊಂಡೆ ಎಂದು ನೆನಪಿಸಿಕೊಂಡರು.

ಸಪ್ತರ್ಷಿಗಳ ದೂರದೃಷ್ಟಿ ಮತ್ತು ಡಾ. ಪ್ರಭಾಕರ ಕೋರೆ ಅವರ ಸಮರ್ಥ ನಿರ್ವಹಣೆಯಿಂದ ಕೆಎಲ್ಇ ಸಂಸ್ಥೆ ಈ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಅನಿಲ್ ಕುಂಬ್ಳೆ ಶ್ಲಾಘಿಸಿದರು.
ನಂತರ ಡಾ. ಪ್ರಭಾಕರ ಕೋರೆ ಅವರು ಶತಮಾನೋತ್ಸವದ ಧ್ವಜ ಹಾರಿಸಿದರು. ಅನಿಲ್ ಕುಂಬ್ಳೆ ಜ್ಯೋತಿ ಬೆಳಗಿದರು. ಕೆಎಲ್ಇ ಶತಮಾನೋತ್ಸವ ಹಾಗೂ ಕ್ರೀಡಾ ಅಕಾಡಮಿ ಸ್ಥಾಪನೆ ನಿಮಿತ್ತ ರಸ್ತೆಗಳಲ್ಲಿ ಜ್ಯೋತಿ ಹಿಡಿದು ಜಾಥಾ ನಡೆಸಲಾಯಿತು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications