ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ತೋರಿಸಿ ಎಂದಿದ್ದಕ್ಕೆ ಚಾಕು ಇರಿತ: ಓರ್ವ ಸಾವು, ಐವರಿಗೆ ಗಾಯ
ಬೆಳಗಾವಿ, ಮೇ, 16: ಟಿಕೆಟ್ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬರು ಚಾಕುವಿನಿಂದ ದಾಳಿ ನಡೆಸಿದ್ದು, ಈ ವೇಳೆ ಅಟೆಂಡರ್ ಸಾವನ್ನಪ್ಪಿದ ಘಟನೆ ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ.
ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ಮುಸುಕುಧಾರಿಯೊಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ. ಇನ್ನು ಈ ವೇಳೆ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರೇನ್ ಅಟೆಂಡರ್ ದೇವ ಋಷಿ (23) ಘಟನೆಯಲ್ಲಿ ಮೃತಪಟ್ಟವರಾಗುದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಒಟ್ಟಿನಲ್ಲಿ ಹೇಳಬೇಕೆಂದರೆ ರೈಲ್ವೆ ನಿಯಮದ ಪ್ರಕಾರ ರೈಲಿನಲ್ಲಿ ಪ್ರಯಾಣ ಮಾಡುವುವಾಗ ಅದ್ಯಾರೇ ಇರಲಿ ಟಿಸಿ ಟಿಕೆಟ್ ಚೆಕ್ಕಿಂಗ್ಗೆ ಬಂದಾಗ ಟಿಕೆಟ್ ತೋರಿಸಬೇಕಾಗುತ್ತದೆ. ಆದರೆ ಇಂದು ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿ ಹಲ್ಲೆ ಮಾಡಿದ್ದು, ಇದು ದೊಡ್ಡ ಅಪರಾಧವಾಗಿದೆ.
ಅದರಲ್ಲೂ ನಿಯಮದ ಪ್ರಕಾರ, ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಒಂದು ವೇಳೆ ಈ ನಿಯಮ ಮೀರಿದರೂ ದಂಡ ಕಟ್ಟಬೇಕಾಗುತ್ತದೆ. ಒಂದು ಟಿಕೆಟ್ ರಹಿತವಾಗಿ ಪ್ರಯಾಣಿಸಿದ್ದಲ್ಲದೆ, ಟಿಸಿ ಮೇಲೆಯೇ ಹಲ್ಲೆ ಮಾಡಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಯತ್ತದೆ. ಆದರೆ ಇಂದು ನಡೆದ ಘಟನೆಯಲ್ಲಿ ಆರೋಪಿ ಒಬ್ಬ ಮುಸುಕುಧಾರಿ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications