"ನೆಹರು ದೂಷಿಸುವ ಬಿಜೆಪಿಯವರು, ಒಂದು 'ಡ್ಯಾಂ'ನ್ನಾದರೂ ನಿರ್ಮಿಸಿದ್ದಾರಾ?"
ಬೆಳಗಾವಿ, ಡಿಸೆಂಬರ್ 28: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಕೂಗಾಡುವ ಬಿಜೆಪಿಯವರೇ ಅತೀ ಹೆಚ್ಚು ಬೀಫ್(ಮಾಂಸ)ವನ್ನು ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಗೋ ಹತ್ಯೆ ನಿಷೇಧ ಕಾಯ್ದೆ ಬಿಲ್ ಪಾಸ್ ಮಾಡಿದ್ದಾರೆ. ಆದರೆ ಇದಕ್ಕೂ ಮೊದಲೇ ಕಾಂಗ್ರೆಸ್ ಈ ಬಿಲ್ ಪಾಸ್ ಮಾಡಿದೆ ಎಂದರು.
ಬಿಜೆಪಿಯವರು ಕೆಲವು ತಿದ್ದುಪಡಿ ಮಾಡಿ 13 ವರ್ಷದ ಗೋವುಗಳ ಹತ್ಯೆಗೆ ಅವಕಾಶ ನೀಡಿದ್ದಾರೆ. ನಿಜವಾಗಿಯೂ ಕಾಯ್ದೆ ಜಾರಿಗೆ ತರುವ ಉದ್ದೇಶವಿದ್ದಿದ್ದರೆ ಸಂಪೂರ್ಣ ಗೋ ಹತ್ಯೆಯನ್ನು ನಿಷೇಧ ಮಾಡಬೇಕಿತ್ತು ಎಂದು ಹೇಳಿದರು.

ಬಿಜೆಪಿಯವರು ಮಾಜಿ ಪ್ರಧಾನಿ ನೆಹರು ಬಗ್ಗೆ ಹೆಚ್ಚು ಟೀಕೆ ಮಾಡುತ್ತಾರೆ. ಎಲ್ಲದಕ್ಕೂ ನೆಹರು ಅವರನ್ನೇ ದೋಷಿಸುತ್ತಾರೆ. ನಿಜಾಂಶ ಎಂದರೆ ದೇಶ ಇಷ್ಟು ಪ್ರಗತಿ ಹೊಂದಲು ನೆಹರು ಅವರೇ ಕಾರಣ. ಅವರ ಪರಿಕಲ್ಪನೆಯಿಂದಲೇ ದೇಶ ಅಭಿವೃದ್ದಿ ಹೊಂದಿದೆ. ಖಾಸಗಿ ಸಂಸ್ಥೆಗಳನ್ನು, ನೀರಾವರಿ ಯೋಜನೆ, ಡ್ಯಾಂ ನಿರ್ಮಾಣ, ಮೆಡಿಕಲ್ ಕಾಲೇಜು, ಐಐಟಿ, ವಿಮಾನ ನಿಲ್ದಾಣ ಇವೆಲ್ಲವೂ ನೆಹರು ಅವರ ಕೊಡುಗೆಯಾಗಿವೆ ಎಂದರು.
ಬಿಜೆಪಿಯವರು ಒಂದೇ ಒಂದು ಡ್ಯಾಂ ಕಟ್ಟಿದ್ದಾರಾ? ಎಂದು ಪ್ರಶ್ನಿಸಿದ ಶಾಸಕ ಸತೀಶ ಜಾರಕಿಹೊಳಿ, ಬಿಜೆಪಿಯವರದ್ದೇನಿದ್ದರೂ ಸರ್ಜಿಕಲ್ ಸ್ಟ್ರೈಕ್, ಗೋ ಹತ್ಯೆ ನಿಷೇಧ, ಲವ್ ಜಿಹಾದ್ ಇಷ್ಟೇ ಇವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.
ದೇಶಭಕ್ತಿ ಪ್ರತಿಯೊಬ್ಬರಿಗೂ ಹುಟ್ಟಿನಿಂದಲೇ ಬಂದಿರುತ್ತದೇ ಅದನ್ನು ಯಾರಿಂದಲೂ ಕಲಿಯಬೇಕಿಲ್ಲ. ದೇಶಭಕ್ತಿ ಹೆಸರಲ್ಲಿ ಬಿಜೆಪಿಯವರು ಜನತೆಯನ್ನು ಇಬ್ಭಾಗ ಮಾಡುತ್ತಿದ್ದಾರೆ. ಸುಳ್ಳು ಹೇಳಿ, ಇತಿಹಾಸ ತಿರುಚಿ ಜನರಿಗೆ ಮರಳು ಮಾಡುತ್ತಿದ್ದಾರೆ. ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದೇ ಅವರ ಹಿಡನ್ ಅಜೆಂಡಾ ಆಗಿದೆ ಎಂದು ಕಿಡಿಕಾರಿದರು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಾವು ಹೆಚ್ಚು ಗೌರವಿಸುತ್ತೇವೆ. ಎಸ್ಸಿ-ಎಸ್ಟಿ ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಸಮಾನತೆಯನ್ನು ನೀಡಿದ್ದಾರೆ. ಎಲ್ಲ ಸಮುದಾಯಕ್ಕೂ ಮೀಸಲಾತಿ ನೀಡಿದ್ದಾರೆ. ತುಳಿತಕ್ಕೊಳಗಾದವರಿಗೆ ನ್ಯಾಯ ಕಲ್ಪಿಸುವುದೇ ಬುದ್ಧ, ಬಸವ, ಅಂಬೇಡ್ಕರ್ ಮೂವರು ಮಹಾನ್ ನಾಯಕರ ಆಶಯವಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications