ಕಿತ್ತೂರು ಅರಮನೆ-ಕೋಟೆ ಅಭಿವೃದ್ಧಿಗೆ ಕಾಲ ಮಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ ಡಿಸೆಂಬರ್ 08: ಕಿತ್ತೂರು ಅರಮನೆ ಹಾಗೂ ಕೋಟೆ ಅಭಿವೃದ್ಧಿಯನ್ನು ಅಕ್ಟೋಬರ್ 2024ರ ಕಾಲಮಿತಿಯೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, "ಬ್ರಿಟೀಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಸೇನೆ ಮೊದಲ ಗೆಲುವು ಸಾಧಿಸಿದ್ದ ಐತಿಹಾಸಿಕ ವಿಜಯಕ್ಕೆ 2024 ಅಕ್ಟೋಬರ್ ಗೆ 200 ವರ್ಷವಾಗಲಿದೆ. ಇದು ಇಡೀ ನಾಡಿನ ಹೆಮ್ಮೆಯ ವಿಚಾರಗಳಲ್ಲೊಂದು.

ಈ ನಿಟ್ಟಿನಲ್ಲಿ ಸರ್ಕಾರ ಐತಿಹಾಸಿಕ ಕಾರ್ಯಕ್ರಮ ಯೋಜಿಸುವ ಆಲೋಚನೆಯಲ್ಲಿದ್ದು, ಅಷ್ಟರೊಳಗೆ ಕಿತ್ತೂರು ಕೋಟೆ ಹಾಗೂ ಅರಮನೆ ಹಾಗೂ ರಾಣಿ ಚೆನ್ನಮ್ಮ ಅವರ ಸಮಾಧಿ ಸ್ಥಳ ಸಂಪೂರ್ಣ ಅಭಿವೃದ್ಧಿಯಾಗಬೇಕು. ಅಲ್ಲದೆ, ಈ ಸ್ಥಳಗಳು ಪ್ರವಾಸಿ ತಾಣವಾಗಿಯೂ ಜನರನ್ನು ಸೆಳೆಯುವಂತಿರಬೇಕು" ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.
ಕೋಟೆ ಹಾಗೂ ಅರಮನೆಯನ್ನು ಸಂರಕ್ಷಿಸುವುದು ನಮ್ಮ ಹೊಣೆ ಮತ್ತು ಜವಾಬ್ದಾರಿ. ನಮ್ಮ ಶ್ರೀಮಂತ ಇತಿಹಾಸ ಹಾಗೂ ಪರಂಪರೆಯ ಕುರುಹುಗಳನ್ನು ಉಳಿಸುವುದು ಮತ್ತು ಮುಂದಿನ ಪೀಳಿಗೆಗೆ ದಾಟಿಸುವುದು ನಮ್ಮ ಮೇಲಿರುವ ಮಹತ್ತರವಾದ ಜವಾಬ್ದಾರಿಯೂ ಆಗಿದೆ. ಹೀಗಾಗಿ ಮುಂದಿನ 200 ವರ್ಷಗಳನ್ನು ಗಮನದಲ್ಲಿಟ್ಟು ಮುಂದಾಲೋಚನೆಯಿಂದಾಗಿ ಈ ತಾಣಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.
ಅಭಿವೃದ್ಧಿ ವಿಚಾರದಲ್ಲಿ ಪ್ರಾಚೀನತೆಯ ಅಂಶಗಳನ್ನೂ ಒಳಗೊಂಡಿರಬೇಕು. ನೋಡುಗರಿಗೆ ಇದು ನಮ್ಮದೇ ಇತಿಹಾಸ ಎಂದು ಸೆಳೆಯುವಂತಿರಬೇಕು. ಈ ನಿಟ್ಟಿನಲ್ಲಿ ಪ್ರಾಧಿಕಾರ ಅಧಿಕಾರಿಗಳು ಪುರಾತತ್ವ ಇಲಾಖೆಯ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕು. ಅವರ ಮೇಲ್ವಿಚಾರಣೆಯಲ್ಲಿ ಎಲ್ಲಾ ಕೆಲಸಗಳೂ ನಡೆಯಬೇಕು ಎಂದು ಅವರು ಸೂಚಿಸಿದರು.

ಪ್ರಾಧಿಕಾರದ ಖಾತೆಯಲ್ಲಿ ಈಗಾಗಲೇ 14.5 ಕೋಟಿ ರೂ. ಹಣ ಇದೆ. ಮುಂದಿನ ವರ್ಷದ ಅನುದಾನವೂ ಸೇರಿ ಕನಿಷ್ಟ 20 ಕೋಟಿ ರೂ. ಪ್ರಾಧಿಕಾರಕ್ಕೆ ಸಿಗಲಿದೆ. ಅಲ್ಲದೆ, ವಿಶೇಷ ಪ್ಯಾಕೇಜ್ ನೀಡಲು-ಕೋಟೆ-ಅರಮನೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ವೆಚ್ಚವನ್ನು ಬಜೆಟ್ ನಲ್ಲಿ ಸೇರಿಸಲೂ ಸಹ ಸರ್ಕಾರ ಸಿದ್ದವಾಗಿದೆ ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications