KSRTC: ನಿಪ್ಪಾಣಿ ಬಳಿ ಕಾಲುವೆಗೆ ಉರುಳಿದ ಸಾರಿಗೆ ಬಸ್, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಳಗಾವಿ, ಡಿಸೆಂಬರ್, 27: ಸಾರಿಗೆ (NWKSRTC) ಬಸ್ವೊಂದು ರಸ್ತೆಯ ಬದಿಯ ಕಾಲುವೆಗೆ ಉರುಳಿದ್ದು, ಪರಿಣಾಮ 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದಲ್ಲಿ ನಡೆದಿದೆ.
ಎದುರಿನಿಂದ ವೇಗವಾಗಿ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ಬಸ್ಅನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಬಸ್ ಕಾಲುವೆಗೆ ಉರುಳಿದೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಇಂಚಲಕರಂಜಿಯಿಂದ ನಿಪ್ಪಾಣಿಗೆ ಬರುತ್ತಿದ್ದ ಬಸ್ ಕಾಲುವೆಗೆ ಬಿದ್ದಿದೆ. ಬಸ್ನಲ್ಲಿ ಸುಮಾರು 75 ಜನ ಪ್ರಯಾಣಿಕರಿದ್ದರು. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ
ಇನ್ನು ಇತ್ತೀಚೆಗಷ್ಟೇ ಕಾರು ಹಾಗೂ ಟಿಟಿ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸೇರಿದಂತೆ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೌದಳ್ಳಿ ಗ್ರಾಮದ ಸಮೀಪ ನಡೆದಿತ್ತು.
ಇನ್ನು ಆನೇಕಲ್ ತಾಲೂಕಿನ ನಿವಾಸಿ ಮಾಲಾ ತೀವ್ರ ಗಾಯಗೊಂಡು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆನೇಕಲ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಟಿಟಿ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಟಿಟಿಯಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ತೀವ್ರ ಗಾಯಗೊಂಡಿದ್ದ ಆನೇಕಲ್ ಗ್ರಾಮದ ನಿವಾಸಿ ಹರೀಶ್ ಅವರ ಪತ್ನಿ ಮಾಲಾ ಅವರನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇನ್ನು ಇವರ ಇಬ್ಬರು ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ಉಳಿದಂತೆ ಟಿಟಿ ವಾಹನದಲ್ಲಿದ್ದ ಹತ್ತಕ್ಕೂ ಹೆಚ್ಚು ಜನರು ಸಹ ಗಾಯಗೊಂಡಿದ್ದು, ಸಮೀಪದ ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಖಾಸಗಿ ಆಸ್ಪತ್ರೆಗಳಿಗೆ ತೆರಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications