ಕುಡಚಿ ಶಾಸಕ ಪಿ. ರಾಜೀವ ತಾಯಿ ಕೋವಿಡ್ಗೆ ಬಲಿ
ಬೆಳಗಾವಿ, ಮೇ 20; ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ ತಾಯಿ ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಬಳಿಕ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಶಾಸಕ ಪಿ. ರಾಜೀವ ತಾಯಿ ಶಾಂತಮ್ಮ ಪಾಂಡಪ್ಪ ಲಮಾಣಿ (72) ಗುರುವಾರ ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
'ನನ್ನ ಪೂಜ್ಯ ತಾಯಿಯವರು ಕೊರೋನಾ ಸೋಂಕಿನಿಂದ ಇಂದು ಮೃತಪಟ್ಟು ನಮ್ಮೆಲ್ಲರನ್ನು ಬಿಟ್ಟು ಅಗಲಿದ್ದಾರೆ. ನಾನು ಸಹ ಅವರ ಪ್ರಾಥಮಿಕ ಸಂಪರ್ಕ ಹೊಂದಿರುವುದರಿಂದ ಯಾರು ನನ್ನನ್ನು ಭೇಟಿಯಾಗಲು ಬರದೆ ಸಂತಾಪ ಸೂಚಿಸಲು ಮನವಿ ಮಾಡುತ್ತೇನೆ' ಎಂದು ಶಾಸಕರು ಫೇಸ್ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಕನೂರು ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ಕುಟುಂಬ ಸದಸ್ಯರು ಮಾಡಿದ್ದಾರೆ.
ಭಾವುಕ ಪೋಸ್ಟ್ ಹಾಕಿದ ಶಾಸಕರು; ತಾಯಿಯನ್ನು ಕಳೆದುಕೊಂಡ ಶಾಸಕರು ಫೇಸ್ಬುಕ್ನಲ್ಲಿ ತಾಯಿ ಜೊತೆ ಕುಳಿತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಭಾವುಕವಾದ ಪೋಸ್ಟ್ ಹಾಕಿದ್ದಾರೆ.
'ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ'
'ನಾನು, ನನ್ನ ಹೆಂಡತಿ, ಎರಡು ಮಕ್ಕಳು, ಇಬ್ಬರು ಆಪ್ತ ಸಹಾಯಕರು ಕರೊನಾದಿಂದ ಚೇತರಿಸಿಕೊಳ್ಳುವಷ್ಟರಲ್ಲಿ ತಾಯಿಯವರು ಸೋಂಕಿಗೆ ಒಳಗಾಗಿದ್ದರಿಂದ ಅವರ ಆರೈಕೆಯಲ್ಲಿ ನಾನೇ ತೊಡಗಿದ್ದರಿಂದ ಮತ್ತು ನನ್ನಕ್ಕ ಹಾಗೂ ಅಕ್ಕನ ಮಗ ಚಿಕಿತ್ಸೆಯನ್ನು ಮನೆಯಲ್ಲಿಯೇ ಪಡೆಯುತ್ತಿರುವುದರಿಂದ ಯಾರಿಗೂ ತಿಳಿಸದೆ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನೆರವೇರಿಸಿರುತ್ತೇನೆ'
'ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಯಾರೂ ಸಹ ಸಾಂತ್ವನ ಹೇಳುವುದಕ್ಕಾಗಿ ಆಗಮಿಸಬಾರದೆಂದು ವಿನಂತಿಸುತ್ತೇನೆ. ಆದಷ್ಟು ಬೇಗ ನನ್ನ ನನ್ನ ಸಾಮಾಜಿಕ ಕರ್ತವ್ಯಕ್ಕೆ ಹಾಜರಾಗುತ್ತೇನೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ' ಎಂದು ಕಾರ್ಯಕರ್ತರು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications