ನೈಸ್ ಕಾರಿಡಾರ್ ವಿರುದ್ಧ ಮತ್ತೆ ಹರಿಹಾಯ್ದ ಕುಮಾರಸ್ವಾಮಿ
ಬೆಳಗಾವಿ, ನವೆಂಬರ್ 22 : ನೈಸ್ ಕಾರಿಡಾರ್ ಮೇಲಿನ ಜೆಡಿಎಸ್ ನ ಹಳೆಯ ದ್ವೇಷ ಇನ್ನೂ ಮುಂದುವರೆದಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಧಿವೇಶನದಲ್ಲಿ ಇಂದು(ನವೆಂಬರ್ 22) ಮತ್ತೊಮ್ಮ ನೈಸ್ ಅಕ್ರಮಗಳ ಕುರಿತು ಮಾತನಾಡಿದರು.
ನೈಸ್ ಅಕ್ರಮ ಸಮಿತಿ ವರದಿ ಮೇಲಿನ ಚರ್ಚೆ ಆರಂಭವಾಗುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಅವರು "ನೈಸ್ ಅಕ್ರಮಗಳ ಕುರಿತು ಕಳೆದ ಅಧಿವೇಶನದಲ್ಲಿಯೇ ವರದಿ ಮಂಡನೆಯಾಗಿದೆ ಆದರೆ ಸರ್ಕಾರ ವರದಿಯನ್ನು ಜಾರಿ ಮಾಡದೆ ಕತ್ತಲೆ ಕೋಣೆಯಲ್ಲಿಟ್ಟಿದೆ' ಎಂದು ಸರ್ಕಾರದ ಮೇಲೆ ಹರಿಹಾಯ್ದರು.

'ನೈಸ್ ಯೋಜನೆ ಹೆಸರಲ್ಲಿ ಬಡ ರೈತರಿಗೆ ಅನ್ಯಾಯ ಮಾಡಲಾಗಿದೆ, ಅದಷ್ಟೆ ಅಲ್ಲದೆ ಹಲವು ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಮಾಡಲಾಗಿದೆ ಅದೆಲ್ಲಾ ಸರ್ಕಾರಕ್ಕೂ ಗೊತ್ತಿದೆ ಆದರೂ ಅದರ ಮೇಲೆ ಕ್ರಮ ಏಕೆ ಜರುಗಿಸಿಲ್ಲ' ಎಂದು ಕುಮಾರಸ್ವಾಮಿ ಗುಡುಗಿದರು.
'ನೈಸ್ ಸಂಸ್ಥೆಯ ಪರ ಕೆಲವು ಪ್ರಮುಖ ಅಧಿಕಾರಿಗಳು ಕೆಲಸ ಮಾಡಿದ್ದಾರೆ, ನೈಸ್ ಗೆ ಅನುಕೂಲವಾಗುವಂತೆ ಅಧಿಕಾರಿಗಳು ದಾಖಲೆ ತಿದ್ದಿದ್ದಾರೆ, ಬಿಎಮ್ಐಸಿ ಸಂಸ್ಥೆಯಲ್ಲಿ ನಮ್ಮ ರಾಜ್ಯದ ಕೆಲವು ನಿವೃತ್ತ ಅಧಿಕಾರಿಗಳು ನಿರ್ದೇಶಕರಾಗಿದ್ದಾರೆ ಅವರೆಲ್ಲಾ ಅಧಿಕಾರದಲ್ಲಿದ್ದಾಗ ನೈಸ್ ಅಕ್ರಮಕ್ಕೆ ಸಹಾಯ ಮಾಡಿದ್ದಾರೆ ಅವರ ಮೇಲೆಯೂ ಕ್ರಮ ಜರುಗಿಸಿಲ್ಲ' ಎಂದು ಅವರು ಪ್ರಶ್ನೆ ಮಾಡಿದರು.
ನೈಸ್ ಕಾರಿಡಾರ್ ಯೋಜನೆ ಪ್ರಾರಂಭವಾದಾಗಿನಿಂದಲೂ ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಅದನ್ನು ವಿರೋಧಿಸುತ್ತಲೆ ಬಂದಿದ್ದಾರೆ. ಈ ಕುರಿತು ಹಲವು ಪ್ರತಿಭಟನೆಗಳನ್ನೂ ಜೆಡಿಎಸ್ ಮಾಡಿತ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications