ರೈತ ಮಹಿಳೆ ಬಗ್ಗೆ ಹೇಳಿಕೆ: ಸದನದಲ್ಲಿ ಕುಮಾರಸ್ವಾಮಿ ಸ್ಪಷ್ಟೀಕರಣ
ಬೆಳಗಾವಿ, ಡಿಸೆಂಬರ್ 19: ಕಬ್ಬು ಬೆಳೆಗಾರ ಹೊರಾಟಗಾರ್ತಿ ಒಬ್ಬರ ಬಗ್ಗೆ ಸಿಎಂ ತುಚ್ಛವಾಗಿ ಮಾತನಾಡಿದ್ದಾರೆ ಎನ್ನಲಾದ ವಿಷಯ ಇಂದು ಬೆಳಗಾವಿ ಸದನದಲ್ಲಿ ಚರ್ಚೆ ಆಯಿತು.
ರೈತ ಮಹಿಳೆ ಬಗ್ಗೆ ಸಿಎಂ ಅವರು ಕೆಟ್ಟದಾಗಿ ಮಾತನಾಡಿದರು ಎಂದು ಪ್ರತಿ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದರು. ಸ್ಪಷ್ಟೀಕರಣ ನೀಡಿದ ಸಿಎಂ, ನನ್ನ ಪದಬಳಕೆಯಲ್ಲಿ ತಪ್ಪಾಗಿರಬಹುದೇ ವಿನಃ ನನ್ನ ಮಾತಿನ ಭಾವದಲ್ಲಿ, ಮನಸ್ಸಿನಲ್ಲಿ ಯಾವುದೇ ತಪ್ಪು ಇಲ್ಲ ಎಂದರು.
'ಇಷ್ಟು ದಿನ ಎಲ್ಲಿ ಮಲಗಿದ್ದೆ ತಾಯಿ?' ಎಂದು ನಾನು ಕೇಳಿದ್ದೆ, ತಾಯಿ ಪದ ಬಳಕೆ ಮಾಡಿದ್ದೇನೆ, ನಾನು ಆಡಿದ ಮಾತಿನಲ್ಲಿ ಉದ್ದೇಶ ಕೆಟ್ಟದಿರಲಿಲ್ಲ ಆದರೆ ನನ್ನ ಮಾತನ್ನು ತಿರುಚಿದರು. 'ಇಷ್ಟು ದಿನ ನಿದ್ದೆ ಮಾಡ್ತಿದ್ದೆ ಏನಮ್ಮ' ಎಂದು ನಾನು ಕೇಳಿದ್ದರೆ ಆಗ ಸರಿ ಇರುತ್ತಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ಆ ಮಹಿಳೆ ನಾಲಾಯಕ್ ಸಿಎಂ ಎಂದಿದ್ದರು, ಕಬ್ಬು ಬೆಳೆಗಾರರ ಕೈಯಿಂದ ಹಣ ಕೊಡಿಸದ ತಪ್ಪು ಈಗ ಅಧಿಕಾರಕ್ಕೆ ಬಂದಿರುವ ನನ್ನ ಮೇಲೆ ಹೊರಿಸಿದ್ದರು, ಆದರೂ ನಾನು ಆಕೆಯ ಮನವಿಗೆ ಸ್ಪಂದಿಸಿದೆ. ಆಕೆ ಕೆಟ್ಟದಾಗಿ ಮಾತನಾಡಿದರೂ ನಾನು ಆ ಉದ್ದೇಶದಿಂದ ಮಾತನಾಡಲಿಲ್ಲ ಎಂದರು.
ಅಕಸ್ಮಾತ್ ನನ್ನ ಪದ ಬಳಕೆಯಿಂದ ಯಾರಿಗಾದರೂ ನೋವಾಗಿದ್ದರೆ ನನ್ನ ಮಾತನ್ನು ವಾಪಸ್ ಪಡೆಯಲು ಸಿದ್ದನಿದ್ದೇನೆ, ನನಗೆ ಯಾವ ಹಿಂಜರಿಕೆಯೂ ಇಲ್ಲ ಎಂದು ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications