ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ; 3 ವರ್ಷಗಳ ನಂತರ ಒಂದಾದ ನಾಯಕರು
ಬೆಳಗಾವಿ, ಅಕ್ಟೋಬರ್ 31: ಮೂರು ವರ್ಷಗಳ ನಂತರ ಪ್ರಭಾವಿ ನಾಯಕರಾದ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಒಂದೇ ಕಡೆ ಕಾಣಿಸಿಕೊಂಡು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತು ನಾಯಕರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಿ ಎಂದು ವರಿಷ್ಠರು ಸೂಚಿಸಿದ ಮೇರೆಗೆ ಎರಡು ದಿನಗಳ ಹಿಂದೆ ಒಂದೇ ವೇದಿಕೆಯಲ್ಲಿ ಸುಮಾರು ಹತ್ತಕ್ಕೂ ಅಧಿಕ ನಾಯಕರು ಸುದ್ದಿಗೋಷ್ಠಿ ನಡೆಸಿದ್ದರು. ಸಚಿವ ರಮೇಶ್ ಜಾರಕಿಹೊಳಿ ಈ ಸುದ್ದಿಗೋಷ್ಠಿಗೆ ಹಾಜರಿರಲಿಲ್ಲ. ಆದರೆ ಕಹಿ ಘಟನೆ ಮರೆತು ಜಿಲ್ಲೆಯ ನಾಯಕರು ಒಂದಾಗಿದ್ದೇವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಅಗ್ರಸ್ಥಾನ ಹೊಂದಬೇಕಿದೆ ಎಂದು ತಿಳಿಸಿದ್ದರು.
ಇದೀಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಅಂತಿಮ ಹಂತಕ್ಕೆ ಬಂದಿದ್ದು, ಹಾವು-ಮುಂಗುಸಿಯಂತಿದ್ದ ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ ಶನಿವಾರ ಒಟ್ಟಿಗೆ ಪ್ರತ್ಯಕ್ಷರಾಗಿದ್ದಾರೆ. ಇದೇ ವೇಳೆ ಬೆಳಗಾವಿಯ ಡಿಸಿಸಿ ಬ್ಯಾಂಕ್ ಕೊಠಡಿಯಲ್ಲಿ ಇಬ್ಬರೂ ಗೌಪ್ಯಸಭೆ ನಡೆಸಿದರು. ಸದ್ಯಕ್ಕೆ 16 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳು ಕಗ್ಗಂಟಾದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನವೊಲಿಸಲು ಕಸರತ್ತು ನಡೆಸಿದರು.

ನಾಮಪತ್ರ ಹಿಂಪಡೆಯಲು ಖಾನಾಪುರ, ರಾಮದುರ್ಗ ಹಾಗೂ ಉಣ್ಣೆ ನಿಗಮದ ಅಭ್ಯರ್ಥಿಗಳು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನವೊಲಿಕೆಗೆ ಡಿಸಿಎಂ ಸವದಿ, ಜಾರಕಿಹೊಳಿ ಮುಂದಾಗಿದ್ದರು. ಆದರೆ ಮನವೊಲಿಕೆ ಯಶಸ್ವಿಯಾಗಿಲ್ಲ.
16 ಕ್ಷೇತ್ರಗಳಲ್ಲಿ 13 ಕ್ಷೇತ್ರಗಳ ಅವಿರೋಧ ಆಯ್ಕೆಯಾಗಿದೆ. ಉಳಿದ ಮೂರು ಕ್ಷೇತ್ರಗಳ ಅವಿರೋಧ ಆಯ್ಕೆಗೆ ಪ್ರಯತ್ನ ಮಾಡಿದೆವು. ಆದರೆ ಸಮಯದ ಅಭಾವದ ಕಾರಣ ಮೂರು ಕ್ಷೇತ್ರಗಳ ಅವಿರೋಧ ಆಯ್ಕೆ ಸಾಧ್ಯವಾಗಲಿಲ್ಲ ಎಂದಿದ್ದಾರೆ. ನವೆಂಬರ್ 6ಕ್ಕೆ ಮೂರು ಕ್ಷೇತ್ರಗಳ ಚುನಾವಣೆ ನಡೆಯಲಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications