ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರಕ್ಕೆ ಜೈ ಎನ್ನುವೆ: ಲಕ್ಷ್ಮಿ ಹೆಬ್ಬಾಳ್ಕರ್
Recommended Video

ಬೆಳಗಾವಿ, ಆಗಸ್ಟ್ 31: ''ಕರ್ನಾಟಕದ ಜಿಲ್ಲೆಯಾದ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರ ಧ್ವಜ ಹಿಡಿದು ಜಯಕಾರ ಹಾಕುತ್ತೇನೆ'' ಎಂದು ಹೇಳಿರುವ ಕರ್ನಾಟಕ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಬೆಳಗಾವಿಯ ಹಳ್ಳಿಯೊಂದರಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ''ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿವಾದ ಇದೆ. ಸುಪ್ರೀಂ ಕೋರ್ಟ್ ಆದೇಶ ಬಂದರೆ, ಬೆಳಗಾವಿ ಜಿಲ್ಲೆ ಮಹಾರಾಷ್ಟ್ರಕ್ಕೆ ಸೇರುತ್ತದೆ. ಹಾಗಾದರೆ, ನಾನು ಮಹಾರಾಷ್ಟ್ರ ಧ್ವಜ ಹಿಡಿದು ಮಹಾರಾಷ್ಟ್ರಕ್ಕೆ ಜೈ ಎನ್ನುತ್ತೇನೆ'' ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ''ಬೆಳಗಾವಿ ಬಗ್ಗೆ ಇಂಥ ಹೇಳಿಕೆ ನೀಡಲು ಯಾರಿಗೆ ಸಾಧ್ಯ'' ಎಂದು ಜಂಭ ಕೊಚ್ಚಿಕೊಂಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ''ಇಂಥ ಹೇಳಿಕೆ ನೀಡಲು ಯಾರಿಗಾದರೂ ಧೈರ್ಯವಿದೆಯೇ, ನನಗೆ ಆ ಧೈರ್ಯವಿದೆ. ನನಗೆ ಯಾರ ಭಯವೂ ಇಲ್ಲ'' ಎಂದು ತಿಳಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಅವರ ಈ ಹೇಳಿಕೆಗೆ ಕನ್ನಡ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.












Click it and Unblock the Notifications