ಗೋಕಾಕ್ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ, ಸ್ವಾಗತಿಸಿದ ಜಾರಕಿಹೊಳಿ!
ಬೆಳಗಾವಿ, ಫೆಬ್ರವರಿ 12: ಬೆಳಗಾವಿ ರಾಜಕೀಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವಿನ ಜಟಾಪಟಿ ಮುಂದುವರೆದಿದೆ. "ಪಕ್ಷ ಬಯಸಿದರೆ ಗೋಕಾಕ್ನಿಂದ ನಾನೇ ಅಭ್ಯರ್ಥಿಯಾಗುತ್ತೇನೆ" ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಶುಕ್ರವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, "ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಟಾರ್ಗೆಟ್ ಮಾಡುತ್ತಿದ್ದಾರೆ. ಮಾಡಲಿ ನಾನೂ ಇನ್ನು ಮುಂದೆ ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದರೆ ಮುಂದಿನ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗುತ್ತೇನೆ" ಎಂದರು.
"ರಮೇಶ್ ಜಾರಕಿಹೊಳಿ ಅವರ ಆರೋಪಕ್ಕೆ ನಾನೇನೂ ಮೌನವಾಗಿಲ್ಲ. ಉತ್ತರ ಕೊಡಲು ನನಗೆ ಹೆಚ್ಚಿನ ಸಮಯವೂ ಬೇಡ. ಕ್ಷೇತ್ರದ ಜನರಿಂದಲೇ ಅವರಿಗೆ ತಕ್ಕ ಉತ್ತರ ಕೊಡಿಸಬೇಕು ಅಂದು ಕೊಂಡಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನರೇ ಅವರಿಗೆ ತಕ್ಕ ಉತ್ತರ ಕೊಡಲಿದ್ದಾರೆ" ಎಂದು ಹೇಳಿದರು.

"ನಾಲ್ಕು-ಐದು ರಾಜ್ಯಗಳಲ್ಲಿ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ನು ನನ್ನ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಹೈಜಾಕ್ ಯಾವ ಲೆಕ್ಕ ಬಿಡಿ. ಅವರು ಪ್ರಜಾಪ್ರಭುತ್ವದ ಮೇಲೆಯೇ ವಿಶ್ವಾಸ ಕಳೆದುಕೊಂಡಿದ್ದಾರೆ. ಸರ್ಕಾರ ಅವರದ್ದಿದೆ, ಅಧಿಕಾರಿಗಳು ಅವರವರೇ ಇದ್ದಾರೆ. ಏನಾದರೂ ಮಾಡಲಿ ಬಿಡಿ, ನಾನು ಅವರಿಗೆ ತಿರುಗೇಟು ನೀಡುವೆ" ಎಂದು ತಿಳಿಸಿದರು.
ಸ್ವಾಗತಿಸಿದ ಜಾರಕಿಹೊಳಿ; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. "ಹೆಬ್ಬಾಳ್ಕರ್ಗೆ ಮೋಸ್ಟ್ ವೆಲ್ ಕಮ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕು ಇದೆ" ಎಂದರು.
"ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಮಾತ್ರವಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು. ಯಾಕೆ ಸರ್ಕಾರ ಪತನ ಆಗಿದೆ ಎನ್ನುವುದು ಅವರ ಗಾಡ್ ಫಾದರ್ಗೆ ಕೇಳಿದರೆ ಒಳ್ಳೇಯದು" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೆಸರು ಹೇಳದೇ ಟಾಂಗ್ ನೀಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications