Belagavi : ರಾಹುಲ್ ಗಾಂಧಿ ಬುದ್ದಿ 5 ವರ್ಷದವರಂತೆ ಎಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 50 ವರ್ಷವಾದರೂ ಅವರ ಬುದ್ಧಿ 5 ವರ್ಷದವರಂತೆ ಇದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಲೇವಡಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
ಚಿಕ್ಕೋಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದರು. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, "ರಾಹುಲ್ ಗಾಂಧಿ ಅವರಿಗೆ 50 ವಯಸ್ಸಾದರೂ ಅವರ ಮಾನಸಿಕ ವಯಸ್ಸು 5 ಎಂದು ಲೇವಡಿ ಮಾಡಿದರು. ನ್ಯಾಯಾಲಯ ರಾಹುಲ್ ಗಾಂಧಿಗೆ ಶಿಕ್ಷೆ ನೀಡಿದರೆ, ಅದಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಾರೆ, ಇದಕ್ಕೆ ಏನು ಹೇಳಬೇಕೋ ತಿಳಿಯುತ್ತಿಲ್ಲ, ಅವರು ಗ್ಯಾರಂಟಿ ಕೊಡಲು ಸಮರ್ಥರು ಎಂದು ನಿಮಗೆ ಎನಿಸುತ್ತಿದಯೇ" ಎಂದು ನೆರೆದವರನ್ನು ಪ್ರಶ್ನಿಸಿದರು.

2018 ರಲ್ಲಿ ಮಧ್ಯಪ್ರದೇಶದಲ್ಲಿ ನಿರುದ್ಯೋಗಿಗಳಿಗೆ 4 ಸಾವಿರ ಕೊಡುವುದಾಗಿ ಭರವಸೆ ನೀಡಿತ್ತು ಆದರೆ ಒಂದು ರುಪಾಯಿಯನ್ನು ನೀಡಲಿಲ್ಲ, ಅವರ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ ಇನ್ನು ಅವರು ನೀಡುವ ಗ್ಯಾರಂಟಿ ಇರುತ್ತಾ ಎಂದು ಪ್ರಶ್ನಿಸಿದರು. ಸ್ವಾತಂತ್ಯ್ರ ಬಂದ ನಂತರ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು ಆದರೆ ನೆಹರೂ ಆ ಕೆಲಸ ಮಾಡಲಿಲ್ಲ, ಆದರೆ ರಾಹುಲ್ ಗಾಂಧಿ ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳುತ್ತಿದ್ದಾರೆ, ಕಾಂಗ್ರೆಸ್ ಅನ್ನು ನಿರ್ನಾಮ ಮಾಡುವವರೆಗೂ ಅವರು ಬಿಡುವುದಿಲ್ಲ ಎಂದು ಹೇಳಿದರು.
ರಾಜ್ಯಾದ್ಯಂತ ಬಿಜೆಪಿ ಭರ್ಜರಿ ಪ್ರಚಾರ
ಶಿವರಾಜ್ ಸಿಂಗ್ ಚೌಹಾನ್ ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ರಾಮದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಚಿಕ್ಕರೇವಣ್ಣಾವ, ಗೋಕಾಕ ಕ್ಷೇತ್ರಕ್ಕೆ ರಮೇಶ ಜಾರಕಿಹೊಳಿ, ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಿಖಿಲ್ ಕತ್ತಿ ಪರವಾಗಿ ಮತ ಯಾಚನೆ ಮಾಡಿದರು.
ರಾಜ್ಯಾದ್ಯಂತ ಬುಧವಾರ ಬಿಜೆಪಿ ಸ್ಟಾರ್ ಪ್ರಚಾರಕರ ದಂಡು ಮತಬೇಟೆಯಲ್ಲಿ ತೊಡಗಿಸಿಕೊಂಡಿದ್ದರು. ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್, ಬಸವರಾಜ ಬೊಮ್ಮಾಯಿ, ರಾಜನಾಥ್ ಸಿಂಗ್, ಅರುಣ್ ಸಿಂಗ್, ಬಿಎಸ್ ಯಡಿಯೂರಪ್ಪ ಮುಂತಾದ ಪ್ರಮುಖ ನಾಯಕರು ರಾಜ್ಯದ ಹಲವು ಭಾಗಗಳಲ್ಲಿ ಪ್ರಚಾರ ಮಾಡಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications