ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದಾಯಿ ರೈತರ ಕೇಸ್ ವಾಪಸ್, ನವೆಂಬರ್‌ನಲ್ಲಿ ಬೆಳಗಾವಿ ಅಧಿವೇಶನ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 1: ಮಹದಾಯಿ ಹೋರಾಟಗಾರರ ಮೇಲಿದ್ದ ಎಲ್ಲಾ ಕೇಸ್ ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಹೋರಾಟಗಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ? ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ರಾಜ್ಯ ಸರ್ಕಾರವು ಮಹದಾಯಿ ಹೋರಾಟಗಾರರ ಮೇಲಿರುವ ಎಲ್ಲಾ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದ್ದು, ಬೆಳಗಾವಿ ಜನತೆಗೆ ಕನ್ನಡ ರಾಜ್ಯೋತ್ಸವಕ್ಕೆ ಬಂಪರ್ ಗಿಫ್ಟ್ ಕೊಡಲು ಮುಂದಾಗಿದೆ.

ಮಹದಾಯಿ : ಕರ್ನಾಟಕದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಗೋವಾ ಮಹದಾಯಿ : ಕರ್ನಾಟಕದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಗೋವಾ

ಮಹದಾಯಿ ಕುಡಿಯುವ ನೀರಿನ ವೀಚಾರವಾಗಿ ಸಾಕಷ್ಟು ಹೋರಾಟಳು ನಡೆದಿವೆ, ಅದರಲ್ಲಿ ಪಾಲ್ಗೊಂಡಿದ್ದ ಹಲವಾರು ಮಂದಿ ಹೋರಾಟಗಾರರ ಮೇಲೆ ದೂರು ದಾಖಲಾಗಿತ್ತು, ಇದೀಗ ಅದೆಲ್ಲವನ್ನೂ ವಾಪಸ್ ಪಡೆಯಲು ಮುಂದಾಗಿದೆ.

Mahadayi farmers case withdrawn: Winter session in Belagavi

ಅಷ್ಟೇ ಅಲ್ಲದೆ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನವೆಂಬರ್ ಕೊನೆಯ ವಾರದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ 5 ದಿನಗಳ ಕಾಲ ಕಲಾಪವನ್ನು ನಡೆಸಲು ತೀರ್ಮಾನಿಸಲಾಗಿದೆ. ಅಗತ್ಯ ಬಿದ್ದರೆ 10 ದಿನಗಳ ಮುಂದುವರೆಸಲು ಚಿಂತನೆ ನಡೆಸಲಾಗಿದೆ. ಜತೆಗೆ ರಾಜ್ಯ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ಎನ್ನುವ ಮಾತುಗಳನ್ನು ತೆಗೆದು ಹಾಕಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಮಹದಾಯಿ ತೀರ್ಪು: ಗೋವಾದಿಂದಲೂ ಮೇಲ್ಮನವಿ ಸಾಧ್ಯತೆ ಮಹದಾಯಿ ತೀರ್ಪು: ಗೋವಾದಿಂದಲೂ ಮೇಲ್ಮನವಿ ಸಾಧ್ಯತೆ

ಇತ್ತೀಚೆಗಷ್ಟೆ ಮಹದಾಯಿ ತೀರ್ಪು ಹೊರಬಿದ್ದಿದ್ದು, ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಇದು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಜಲವಿವಾದವಾಗಿತ್ತು. ಕರ್ನಾಟಕಕ್ಕೆ 13.42, ಗೋವಾಕ್ಕೆ 24 ಮತ್ತು ಮಹಾರಾಷ್ಟ್ರಕ್ಕೆ 1.30 ಟಿಎಂಸಿ ನೀರನ್ನು ಮಹದಾಯಿ ನ್ಯಾಯಾಧೀಕರಣ ಹಂಚಿಕೆ ಮಾಡಿದೆ.

English summary
To oblige MLAs and people of north Karnataka the sate government has taken two major decisions on Monday. Criminal cases will be withdrawn against Mahadayi farmers and five days winter legislature session will be held in Belgaum in November last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X