ಬೆಳಗಾವಿಯಲ್ಲಿ ಮಹಾರಾಷ್ಟ್ರ ಅಧಿವೇಶನ : ಕರ್ನಾಟಕ ಸರಕಾರಕ್ಕೆ ಸವಾಲ್
ಬೆಳಗಾವಿ, ನವೆಂಬರ್ 13: ಬೆಳಗಾವಿ ಮಹಾಮೇಳಾವದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಜಯಂತ ಪಾಟೀಲ ಕರ್ನಾಟಕ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಮುಂಬೈ ಮತ್ತು ನಾಗಪುರದಲ್ಲಿ ಮಹಾರಾಷ್ಟ್ರ ಸರಕಾರದ ಅಧಿವೇಶನ ನಡೆಯುತ್ತದೆ. ಮುಂದಿನ ವರ್ಷ ಬೆಳಗಾವಿಯಲ್ಲಿ ಮಹಾರಾಷ್ಟ್ರ ಸರಕಾರದ ಅಧಿವೇಶನ ನಡೆಸಲು ಉತ್ಸುಕರಾಗಿದ್ದೇವೆ ಎಂದು ಹುಸಿ ಪ್ರತಾಪ ತೋರಿದ್ದಾರೆ.

ಬೆಳಗಾವಿ ಮರಾಠಿಗರ ಬೆನ್ನಿಗೆ ಮಹಾರಾಷ್ಟ್ರ ಸರಕಾರವಿದೆ. ಮುಂದಿನ ಚುನಾವಣೆಯಲ್ಲಿ ಎಂಇಎಸ್ ಶಾಸಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿ. ಎಂಇಎಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾದರೆ ಸುಪ್ರೀಂ ಕೋರ್ಟ್ ನಲ್ಲಿ ಅನುಕೂಲವಾಗುತ್ತದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.
ಎಂಇಎಸ್ ಯಾವುದೇ ಸಭೆಗಳನ್ನು ಆಯೋಜನೆ ಮಾಡಿದರೂ ನಾವು ಬರುತ್ತೇವೆ ಎಂದು ಜಯಂತ್ ಪಾಟೀಲ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.












Click it and Unblock the Notifications