ಶತಮಾನೋತ್ಸವ: ಸುವರ್ಣಸೌಧದಲ್ಲಿ ಬೃಹತ್ ಗಾಂಧೀ ಪ್ರತಿಮೆ ಅನಾವರಣದ ಅಪ್ಡೇಟ್
ಬೆಳಗಾವಿ, ಡಿಸೆಂಬರ್ 25: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಅದ್ಧೂರಿ ಶತಮಾನೊತ್ಸವ ಕಾರ್ಯಕ್ರಮ ನಡೆಯಲಿದೆ. ವಿವಿಧೆಡೆ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಇತ್ತ ಬೆಳಗಾವಿಯ ಸುವರ್ಣಸೌಧದಲ್ಲಿ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳ್ಳಲಿದೆ.
ಸುವರ್ಣಸೌಧದಲ್ಲಿ ಶುಕ್ರವಾರ ಡಿಸೆಂಬರ್ 27 ಗಾಂಧಿ ಪ್ರತಿಮೆ ಅನಾವರಣ ಮಾಡಲು ಸರ್ಕಾರ ಯೋಜಿಸಿದೆ. ಈ ಸಂಬಂಧ ಬುಧವಾರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಶತಮಾನೋತ್ಸವವನ್ನು ಅರ್ಥಪೂರ್ಣ ಆಚರಣೆಗಾಗಿ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶ ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಶತಮಾನೋತ್ಸವ ಭಾಗವಾಗಿ ಗಾಂಧೀಜಿ ಪುತ್ಥಳಿ ಇಲ್ಲಿ ಸ್ಥಾಪಿಸಲಾಗಿದೆ.
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ ಸುಧಾರಣೆಯ ಅಸ್ತ್ರವಾಗಿತ್ತು. ನಾಡಿನಲ್ಲಿದ್ದ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆ ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಅವರು ಶಕ್ತಿ ತುಂಬಿದ್ದರು.
ವರ್ಷಪೂರ್ತಿ ಸರ್ಕಾರದಿಂದ 41 ಕಾರ್ಯಕ್ರಮ
ಅಂದು ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೇಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪುತ್ಥಳಿ, ಸ್ಮಾರಕ ಭವನ ಉದ್ಘಾಟನೆ
ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಬೃಹತ್ ಪ್ರತಿಮೆ ಅಂದು ಬೆಳಗ್ಗೆ 10 ಗಂಟೆಗೆ ಅನಾವರಣಗೊಳ್ಳಲಿದೆ. ಈ ಬೃಹತ್ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ್ಯ ಹೊರಾಟಗಾರರನ್ನು, ಆಹ್ವಾನಿಸಲಾಘಿದೆ.
ಡಿ.26 ರಂದು ನಗರದ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications