ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸವದಿ ಕುರಿತು 'ವಿಷ ನೀಡಿದರೂ ಅಮೃತವಾಗಲಿ' ಎಂದಿದ್ಯಾಕೆ ಕುಮಟಳ್ಳಿ?

By ಬೆಳಗಾವಿ ಪ್ರತಿನಿಧಿ
|
Google Oneindia Kannada News

Recommended Video

ಮಹೇಶ್ ಕುಮಟಳ್ಳಿ ಬಗ್ಗೆ ಸವದಿ ಕಿಡಿನುಡಿ

ಬೆಳಗಾವಿ, ಸೆಪ್ಟೆಂಬರ್ 27: ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭ ಅಥಣಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಲಕ್ಷ್ಮಣ ಸವದಿ ಅವಾಚ್ಯ ಶಬ್ದಗಳನ್ನು ಬಳಸಿದ್ದ ವಿಡಿಯೋ ವೈರಲ್ ಆಗಿದ್ದು, ಅದಕ್ಕೆ ಮಹೇಶ್ ಕುಮಟಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ.

ಅಥಣಿ ಉಪ ಚುನಾವಣೆ; ಲಕ್ಷ್ಮಣ ಸವದಿಗೆ ಇಲ್ಲ ಬಿಜೆಪಿ ಟಿಕೆಟ್!ಅಥಣಿ ಉಪ ಚುನಾವಣೆ; ಲಕ್ಷ್ಮಣ ಸವದಿಗೆ ಇಲ್ಲ ಬಿಜೆಪಿ ಟಿಕೆಟ್!

ಇಂದು ಬೆಳಿಗ್ಗೆ ಸಂತ್ರಸ್ತರ ಅಳಲು ಕೇಳಲೆಂದು ಪ್ರವಾಹ ಪೀಡಿತ ಗ್ರಾಮಗಳಿಗೆ ತಮ್ಮ ಬೆಂಬಲಿಗರ ಜೊತೆ ಹೊರಟಿದ್ದ ಲಕ್ಷ್ಮಣ ಸವದಿ, ಮೊಬೈಲ್ ನಲ್ಲಿ ಮಾತನಾಡುತ್ತಾ "ಕುಮಟಳ್ಳಿಯಂಥ ದರಿದ್ರ ಮಕ್ಕಳ ಹೆಸರು ನೆನಪಿಸಬೇಡಿ, ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ" ಎಂದು ಮಾತಾಡಿದ್ದರು.

Mahesh Kumtalli Reacts To The Statement Of Lakshmana Savadi

ಸವದಿ ಮಾತಾಡಿದ್ದ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಹೇಶ್ ಕುಮಟಳ್ಳಿ, "ಅವರು ಆ ರೀತಿ ಮಾತಾಡಬಾರದಾಗಿತ್ತು. ನನಗೆ ಯಾರೇ ವಿಷ ನೀಡಿದರೂ ಅದು ಅಮೃತವಾಗಲಿ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ನನಗೆ ಅರ್ಥವಾಗಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

English summary
MLA Mahesh Kumatalli gave answer to a Lakshman Savadi, who has spoken bad about him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X