ಮರಾಠಿ ನಾಮಫಲಕ : ಎಳ್ಳೂರಲ್ಲಿ ಎಂಇಎಸ್ ಪುಂಡಾಟಿಕೆ
ಬೆಳಗಾವಿ/ಬೆಂಗಳೂರು, ಜು. 26 : ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನೇ ಧಿಕ್ಕರಿಸುವ ದಾರ್ಷ್ಟ್ಯವನ್ನು ತೋರಿದೆ. ಬೆಳಗಾವಿ ತಾಲೂಕಿನ ಎಳ್ಳೂರು ಮಹಾರಾಷ್ಟ್ರಕ್ಕೆ ಸೇರಿದೆ ಎಂಬ ಫಲಕವನ್ನು ಶನಿವಾರ ಮರುಸ್ಥಾಪಿಸುವ ಮುಖಾಂತರ ಇಡೀ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗೆ ಸವಾಲು ಒಡ್ಡಿದ್ದಾರೆ.
ಕರ್ನಾಟಕದ ಹೈಕೋರ್ಟಿನ ಆದೇಶದಂತೆ 'ಮಹಾರಾಷ್ಟ್ರ ರಾಜ್ಯ ಎಳ್ಳೂರು' ಎಂಬ ಮರಾಠಿಯಲ್ಲಿದ್ದ ನಾಮಫಲಕವನ್ನು ಜಿಲ್ಲಾಡಳಿತ ಕಿತ್ತೊಗೆಯಲಾಗಿತ್ತು. ಜು.28ರೊಳಗೆ ಫಲಕವನ್ನು ಕಿತ್ತೊಗೆಯಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಜು.25ರಂದು ಶುಕ್ರವಾರ ಜಿಲ್ಲಾಡಳಿತ ನಾಮಫಲಕವನ್ನು ಒಡೆಸಿಹಾಕಿತ್ತು.
ಭೀಮಪ್ಪ ಗಡದ್ ರಿಟ್ : ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗುಂಡಪ್ಪ ಗಡದ್ ಎಂಬುವವರು ಮರಾಠಿ ನಾಮಫಲಕ ತೆಗೆಸಬೇಕೆಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾ. ಎಚ್.ಜಿ. ರಮೇಶ್ ಅವರಿದ್ದ ವಿಭಾಗೀಯ ಪೀಠ ಗಡದ್ ಅವರ ಪರವಾಗಿ ಆದೇಶ ಹೊರಡಿಸಿತ್ತು.

ಮರಾಠಿಗರ ಪುಂಡಾಟಿಕೆ : ಇದರ ವಿರುದ್ಧ ಇಡೀ ಊರಿಗೆ ಊರೇ ತಿರುಗಿ ನಿಂತಿದೆ. ಪುಂಡರು, ಪೋಕರಿಗಳು, ಮಕ್ಕಳು, ಮಹಿಳೆಯರು ಸೇರಿದಂತೆ ಎಳ್ಳೂರಿನ ಗ್ರಾಮಸ್ಥರು ಕೋಲು, ದೊಣ್ಣೆ, ಕಲ್ಲುಗಳನ್ನು ಹಿಡಿದುಕೊಂಡು, ಭದ್ರತೆಗೆಂದು ಬಂದಿದ್ದ ಕರ್ನಾಟಕ ಮೀಸಲು ಪಡೆಯ ಪೊಲೀಸರನ್ನೇ ಹಿಮ್ಮೆಟ್ಟಿಸಿದ್ದಾರೆ. ಅವರ ಮೇಲೆ ಕಲ್ಲು ತೂರುತ್ತ ಪೊಲೀಸರೇ ಪರಾರಿಯಾಗುವಂತೆ ಮಾಡಿದ್ದಾರೆ. ಅಲ್ಲದೆ, ನಾಮಫಲಕ ಮತ್ತೆ ನಿರ್ಮಿಸಿ, ಹಾರ ಹಾಕಿ ಕರ್ನಾಟಕ ಮತ್ತು ಕನ್ನಡಿಗರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಸ್ತೆಯಲ್ಲಿ ಕಲ್ಲು, ಮರಗಳನ್ನು ಹಾಕಿ ರಸ್ತೆಗೆ ತಡೆಯೊಡ್ಡಿದ್ದಾರೆ.
ಸಿದ್ದು ಏನು ಮಾಡುತ್ತಿದ್ದಾರೆ? : ರಾಜ್ಯ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ಸಿದ್ದರಾಮಯ್ಯನವರು ಏನು ಮಾಡುತ್ತಿದ್ದಾರೆ? ಪೊಲೀಸ್ ಮಹಾನಿರ್ದೇಶಕ ಪಚಾವೋ ಏನು ಮಾಡುತ್ತಿದ್ದಾರೆ? ಬೆಳಗಾವಿಯ ಕನ್ನಡಪರ ಹೋರಾಟಗಾರರು ಏನು ಮಾಡುತ್ತಿದ್ದಾರೆ? ಬೆಳಗಾವಿ ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ? ಈ ಮರಾಠಿ ಪುಂಡರ ಅಟ್ಟಹಾಸ ತಡೆಗಟ್ಟಲು ಇವರಿಗೆ ಸಾಧ್ಯವಿಲ್ಲವೆ?
#belgaum #yellur Sign board with Maharashtra Rajya removed by police #Karnataka #maharshtra pic.twitter.com/8fHKP8DNOh
— All About Belgaum (@allaboutbelgaum) July 25, 2014 ಬೆಂಗಳೂರಿನಲ್ಲಿ ಪ್ರತಿಭಟನೆ : ಎಳ್ಳೂರಿನಲ್ಲಿ ನಡೆದ ಅವಮಾನಕರ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಮೈಸೂರು ವೃತ್ತದಲ್ಲಿ, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿದವು. ಶಿವಸೇನೆ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆ ಹೀಗೇ ಮುಂದುವರಿದರೆ ಮರಾಠಿಗರೆಲ್ಲ ಬೆಳಗಾವಿ ಬಿಟ್ಟು ಹೋಗಬೇಕಾಗುತ್ತದೆ ಎಂದು ವಾಟಾಳ್ ಗುಡುಗಿದರು.
ಕನ್ನಡಕ್ಕೆ ಮಾಡುತ್ತಿರುವ ಅವಮಾನವನ್ನು ನಿಲ್ಲಿಸದಿದ್ದರೆ ಕರ್ನಾಟಕದ ಗಡಿಯಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು. ಮಹಾರಾಷ್ಟ್ರದ ಯಾವುದೇ ವಾಹನ ಒಳಬರಲು ಅವಕಾಶ ನೀಡುವುದಿಲ್ಲ ಎಚ್ಚರ ಎಚ್ಚರ ಎಂದು ಎಚ್ಚರಿಸಿರುವ ಅವರು, ಜು.31ರಂದು ಕರೆಯಲಾಗಿರುವ ಬಂದ್ ಅತ್ಯಾಚಾರದ ವಿರುದ್ಧ ಮಾತ್ರವಲ್ಲ ಎಂಇಎಸ್ ಪುಂಡಾಟಿಕೆಯ ವಿರುದ್ಧವೂ ಆಚರಿಸಲಾಗುತ್ತದೆ ಎಂದು ಹೇಳಿದರು.
ಮರಾಠಿ ನಾಮಫಲಕ ತೆರವು ಮಾಡಿದ್ದನ್ನು ವಿರೋಧಿಸಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿಯೂ ಶುಕ್ರವಾರ ಮರಾಠಿಗರು ಪ್ರತಿಭಟನೆ ನಡೆಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಲ್ಲು ತೂರಿ, ಗಾಜು ಪುಡಿಪುಡಿ ಮಾಡಿ ಪ್ರತಿರೋಧ ವ್ಯಕ್ತಪಡಿಸಿದ್ದರು. ಇದರ ವಿರುದ್ಧ ರೊಚ್ಚಿಗೆದ್ದಿರುವ ಕನ್ನಡಪರ ಸಂಘಟನೆಗಳು ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿವೆ.
ಧಾರವಾಡದಲ್ಲಿ ಮಹಾರಾಷ್ಟ್ರ ಬ್ಯಾಂಕ್ ಮೇಲೆ ದಾಳಿ : ಮರಾಠಿಗರ ಪುಂಡಾಟಿಕೆಯಿಂದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಧಾರವಾಡದ ರೀಗಲ್ ಸರ್ಕಲ್ ನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ ಮಹಾರಾಷ್ಟ್ರ ಬ್ಯಾಂಕ್ ಮೇಲೆ ಕನ್ನಡಪರ ಹೋರಾಟಗಾರರು ದಾಳಿ ನಡೆಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications