ಹಿಂಡಲಗಾ ಜೈಲಿನಲ್ಲಿ ಕಡ್ಲೆಕಾಯಿ ಸಿಪ್ಪೆಯೊಳಗೆ ಗಾಂಜಾ ಪೂರೈಕೆ
ಬೆಳಗಾವಿ, ಜುಲೈ 14: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಗಾಂಜಾ ಕೂಡ ಆರಾಮವಾಗಿ ಸಿಗ್ತಿದೆ ಎಂಬ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗಾಂಜಾವನ್ನು ಜೈಲಿನೊಳಗೆ ತರಿಸಲು ಎಂಥ ಖತರ್ನಾಕ್ ಉಪಾಯ ಮಾಡಿದ್ದಾರೆ ಗೊತ್ತೆ?
ಹೌದು, ನೀವು ಖಂಡಿತಾ ಅಚ್ಚರಿ ಪಡ್ತೀರಿ. ಕಡ್ಲೆಕಾಯಿ ಸಿಪ್ಪೆಯೊಳಗೆ ಗಾಂಜಾ ಇಟ್ಟು, ಅದನ್ನು ಕೈದಿಗಳಿಗೆ ಪೂರೈಸುತ್ತಿರುವುದು ಬಯಲಾಗಿದೆ. ಯಾರೋ ವ್ಯಕ್ತಿ ಕೈದಿಯೊಬ್ಬನಿಗೆ ತಂದುಕೊಟ್ಟಿದ್ದ ಕಡಲೆಕಾಯಿಯನ್ನು ಅಧಿಕಾರಿಗಳು ಪರಿಶೀಲಿಸಿದಾಗ ಈ ಅಕ್ರಮ ದಂಧೆ ಗೊತ್ತಾಗಿದೆ.

ಕಾರಾಗೃಹದ ಸಂದರ್ಶಕರ ಕೊಠಡಿಯಲ್ಲಿ ಪತ್ತೆಯಾದ ಕಡ್ಲೆಕಾಯಿಯೊಳಗೆ ಗಾಂಜಾ ತುಂಬಲಾಗಿತ್ತು. ಇದರಿಂದ ಹುಷಾರಾದ ಸಿಬ್ಬಂದಿ, ಕೈದಿಗಳ ಕಡೆಯವರು ಕಡ್ಲೆಕಾಯಿ ತಂದುಕೊಡುವುದಕ್ಕೆ ನಿರ್ಬಂಧ ವಿಧಿಸಿದ್ದಾರೆ.
ಗಾಂಜಾ ಕಳ್ಳಸಾಗಣೆ ಘಟನೆ ಒಂದೂವರೆ ತಿಂಗಳ ಹಿಂದೆ ನಡೆದಿದೆ. ಕೈದಿಗಳಿಗೆ ಕಡಲೇ ಬೀಜ ತಂದಿದ್ದರೆ ಅನುಮಾನ ಇರುತ್ತಿರಲಿಲ್ಲ. ಆದರೆ ಕಡಲೆಕಾಯಿ ಸಿಪ್ಪೆ ಸಮೇತ ಇದ್ದದ್ದು ಅನುಮಾನಕ್ಕೆ ಕಾರಣವಾಗಿ ಪರಿಶೀಲಿಸಿದೆವು. ಸಿಪ್ಪೆ ಬಿಡಿಸಿ ಬೀಜವನ್ನು ತೆಗೆದು ಆ ಜಾಗದಲ್ಲಿ ಗಾಂಜಾ ತುಂಬಿ ಮತ್ತೆ ಸಿಪ್ಪೆಯನ್ನು ಅಂಟಿಸಿ ಪೂರೈಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಂಜಾ ತುಂಬಿದ್ದ ಕಡ್ಲೆಕಾಯಿ ಒಬ್ಬ ಕೈದಿ ಬಳಿ ಸಿಕ್ಕಿದೆ. ಆತನಿಗೆ ತಂದುಕೊಟ್ಟವರು ಯಾರು ಎನ್ನುವುದು ಗೊತ್ತಾಗಿಲ್ಲ ಎಂದು ಹೇಳಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications