ಖಾನಾಪುರದ ಬಸಪ್ಪ ಬಜಂತ್ರಿ ಶ್ರೀನಗರದಲ್ಲಿ ಹುತಾತ್ಮ
ಬೆಳಗಾವಿ, ಏಪ್ರಿಲ್ 04 : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಪಂತ ಚೌಕ್ ನಲ್ಲಿ ಸೋಮವಾರ ಸಿಆರ್ಪಿಎಫ್ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತನಾಗಿರುವ ಹೆಡ್ ಕಾನ್ಸ್ಟೇಬಲ್ ಬಸಪ್ಪ ಬಜಂತ್ರಿ ಅವರು ಕರ್ನಾಟಕದವರು.
ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಮೃತರಾದ ಬಸಪ್ಪ ಬಜಂತ್ರಿ ಅವರು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದವರು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ್ದು ಇದೇ ಗ್ರಾಮದಲ್ಲಿ. [ಸಿಆರ್ಪಿಎಫ್ ಮೇಲೆ ಉಗ್ರರ ದಾಳಿ, ಓರ್ವನ ಸಾವು, ಐವರಿಗೆ ಗಾಯ]

ಶ್ರೀನಗರದಲ್ಲಿ ನಡೆಯಲಿರುವ ಉಪಚುನಾವಣೆಯ ಭದ್ರತೆಗಾಗಿ ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆಗ ಉಗ್ರರು ಸಿಬ್ಬಂದಿಯಿದ್ದ ವಾಹನದ ಮೇಲೆ ಗುಂಡಿನ ಮಳೆಗರೆದು ಪರಾರಿಯಾಗಿದ್ದರು. [ಟೂರಿಸಂ ಬೇಕಾ, ಟೆರರಿಸಂ ಬೇಕಾ?: ಕಾಶ್ಮೀರಿಗಳಿಗೆ ಮೋದಿ ಪ್ರಶ್ನೆ]
ಈ ಘಟನೆಯಲ್ಲಿ 6 ಪೊಲೀಸರು ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಕಾರಿಯಾಗದೆ ಕರ್ನಾಟಕದ ಬಸಪ್ಪ ಬಜಂತ್ರಿ ಅವರು ಅಸುನೀಗಿದರು. ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.
WATCH: Wreath laying ceremony of Head Constable Basappa Bajantri who lost his life in Pantha Chowk (J&K) attack https://t.co/bwpn43VEeb
— ANI (@ANI_news) April 4, 2017
ಹುತಾತ್ಮರಾದ ಬಸಪ್ಪ ಬಜಂತ್ರಿ ಅವರಿಗೆ ಶ್ರೀನಗರದಲ್ಲಿ ಸೇನಾ ನಿಯಮದಂತೆ ಮಂಗಳವಾರ ಅಂತಿಮ ನಮನ ಸಲ್ಲಿಸಲಾಯಿತು. ಅವರ ದೇಹವನ್ನು ಅವರ ಹುಟ್ಟೂರಿಗೆ ಸದ್ಯದಲ್ಲಿಯೇ ತರಲಾಗುವುದೆಂದು ತಿಳಿದುಬಂದಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications