ಕನ್ನಡ ರಾಜ್ಯೋತ್ಸವದಂದು ಕಿರಿಕ್ ಮಾಡಲು ಅನುಮತಿ ಕೇಳಿದ ಎಂಇಎಸ್
ಬೆಳಗಾವಿ, ಅಕ್ಟೋಬರ್ 30: ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ತನ್ನ ಫುಂಡತನವನ್ನು ಈ ಬಾರಿಯೂ ಮುಂದುವರೆಸುವ ಯತ್ನ ಮಾಡಿದೆ. ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಅದು ಅನುಮತಿ ಕೇಳಿದೆ.
ಎಂಇಎಸ್ಗೆ ನವೆಂಬರ್ 1 ರಂದು ಕರಾಳ ದಿನ ಆಚರಣೆಗೆ ಅನುಮತಿ ನೀಡಬೇಕೋ ಬೇಡವೋ ಎಂಬುದನ್ನು ನಾಳೆ (ಅಕ್ಟೋಬರ್ 31) ರಂದು ನಿರ್ಧರಿಸಲಾಗುವುದು ಎಂದು ಬೆಳಗಾವಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸೀಮಾ ಲಾಟ್ಕರ್ ಅವರು ಹೇಳಿದ್ದಾರೆ.
ಇದು ಅತ್ಯಂತ ಸೂಕ್ಷ್ಮ ವಿಚಾರ ಆಗಿರುವ ಕಾರಣ ಪೊಲೀಸ್ ಇಲಾಖೆ ವರದಿ ಆಧರಿಸಿ ಮೆರವಣಿಗೆಗೆ ಅವಕಾಶ ನೀಡಬೇಕೊ ಬೇಡವೋ ಎಂದು ನಿರ್ಧರಿಸಲಾಗುತ್ತದೆ. ಅನುಮತಿ ಕೇಳಿರುವ ಸದಸ್ಯರಲ್ಲಿ ಮೂವರಿಂದ ತಲಾ 5 ಲಕ್ಷಗಳ ಸ್ವಯಂ ಮುಚ್ಚಳಿಕೆ ಬರೆಸಿಕೊಳ್ಳುವ ಯೋಜನೆ ಇದೆ ಎಂದು ಅವರು ಹೇಳಿದರು.

ಸಾಂಭಾಜಿ ವೃತ್ತದಿಂದ ಮೆರವಣಿಗೆ ಮಾಡಲು ಅವಕಾಶ ಕೇಳಲಾಗಿದೆ, ಮೆರವಣಿಗೆ ಸಮಯದಲ್ಲಿ ಕನ್ನಡ ವಿರೋಧಿ ಘೋಷಣೆ ಕೂಗುವ ಸಂಭವವೂ ಇದೆ. ಹಾಗಾಗಿ ಜಿಲ್ಲಾಡಳಿತವು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಾಳೆ ಪೊಲೀಸ್ ಇಲಾಖೆಯೊಂದಿಗೆ ಸಭೆ ಮಾಡಲಿದೆ. ಎಂಇಎಸ್ ಸದಸ್ಯರು ಮುಚ್ಚಳಿಕೆ ಕೊಟ್ಟ ನಂತರವೇ ಅನುಮತಿ ಕೊಡುವ ಬಗ್ಗೆ ಚರ್ಚಿಸಲಾಗುವುದು ಎಂದು ಸೀಮಾ ಲಾಟ್ಕರ್ ಹೇಳಿದ್ದಾರೆ.
ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯು ಕರಾಳ ದಿನ ಆಚರಣೆ ಮಾಡಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಪುಂಡಾಟಿಕೆಯನ್ನು ಮಾಡುತ್ತಲೇ ಬಂದಿದೆ. ಈ ಬಾರಿಯೂ ಅದನ್ನು ಮುಂದುವರೆಸುವ ಯತ್ನ ಮಾಡುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications