ಸರ್ಕಾರ, ಜಿಲ್ಲಾಡಳಿತ ಆದೇಶಕ್ಕೆ ಕ್ಯಾರೇ ಎನ್ನದ ಎಂಇಎಸ್: ಕರಾಳ ದಿನಾಚರಣೆಗೆ ಸಜ್ಜು
ಬೆಳಗಾವಿ, ಅಕ್ಟೋಬರ್ 21: ಬೆಳಗಾವಿಯಲ್ಲಿ ನವೆಂಬರ್ ತಿಂಗಳು ಬಂದರೆ ಸಾಕು ನಾಡದ್ರೋಹಿ ಎಂಇಎಸ್ ಪುಂಡರ ಅಟ್ಟಹಾಸ ಹೆಚ್ಚಾಗುತ್ತದೆ. ಪ್ರತಿ ವರ್ಷವೂ ಇಲ್ಲಿ ಇದೇ ಸಮಸ್ಯೆಯಾಗಿದ್ದು, ನಾಡದ್ರೋಹಿ ಎಂಇಎಸ್ ಪುಂಡರಿಗೆ ಎಷ್ಟೇ ಎಚ್ಚರಿಕೆ ಕೊಟ್ಟರೂ ಕೂಡ ಅವರ ಕ್ಯಾತೆಯನ್ನು ಮುಂದುವರಿಸಿದ್ದಾರೆ. ಈ ವರ್ಷವೂ ಕೂಡ ಎಂಇಎಸ್ ಸದಸ್ಯರು ಕನ್ನಡ ರಾಜ್ಯೋತ್ಸವದ ದಿನ ಪುಂಡಾಟ ಮೆರೆಯಲು ಸಜ್ಜಾಗುತ್ತಿದ್ದಾರೆ.
ಬೆಳಗಾವಿ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ಕೆಲವು ಮುಖಂಡರು ಇತ್ತೀಚಿಗೆ ಮತ್ತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನವೆಂಬರ್ 1ರಂದು ಕರಾಳ ದಿನಾಚರಣೆಗೆ ಆಚರಿಸುವ ಬಗ್ಗೆ ಚರ್ಚೆಯಾಗಿದೆ. ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಕರಾಳ ದಿನಾಚರಿಸಿಯೇ ನಾವು ಸಿದ್ಧ ಎಂದು ಎಂಇಎಸ್ ಮುಖಂಡರು ನಿರ್ಧರಿಸಿದ್ದಾರೆ.

ನವೆಂಬರ್ ಒಂದರಂದು ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ಕೊಡಲಿ, ಬಿಡಲಿ ಕರಾಳ ದಿನಾಚಾರಣೆಗೆ ಎಲ್ಲರೂ ಸಿದ್ಧತೆ ಮಾಡಿಕೊಂಡು ಸಾವಿರಾರು ಸಂಖ್ಯೆಯಲ್ಲಿ ಸೈಕಲ್ ರ್ಯಾಲಿಯಲ್ಲಿ ಭಾಗವಹಿಸುವಂತೆ ಎಂಇಎಸ್, ಜಿಲ್ಲಾಡಳಿತ ವಿರುದ್ಧ ಮತ್ತೇ ಹಳೆ ಚಾಳಿ ಮುಂದುವರೆಸಿದೆ.
ಬೆಳಗಾವಿಯಲ್ಲಿ ಪುಂಡ ಎಂಇಎಸ್ ನಾಯಕರು ನಡೆಸಿದ ಸಭೆಯಲ್ಲಿ ನವೆಂಬರ್ ಒಂದರಂದು ಕರಾಳ ದಿನಾಚಾರಣೆ ಆಚರಿಸುವ ನಿರ್ಣಯ ಕೈಗೊಂಡಿದೆ.
ಈ ಬಗ್ಗೆ ಎಂಇಎಸ್ ಮುಖಂಡ ಮನೋಹರ ಕಿಣೇಕರ ಮಾತನಾಡಿ, 'ಜಿಲ್ಲಾಡಳಿತ ಅನುಮತಿ ಕೊಡಲಿ, ಬಿಡಲಿ, ಕಳೆದ 1956ರಲ್ಲಿ ಕರ್ನಾಟಕದಲ್ಲಿ ಅನ್ಯಾಯವಾಗಿ ಗಡಿ ಗುರುತಿಸಲಾಯಿತು. ಅಂದಿನಿಂದ, ನವೆಂಬರ್ ಒಂದರಂದು ಕರಾಳ ದಿನವಾಗಿ ಆಚರಿಸಲಾಗುತ್ತದೆ. ಕರಾಳ ದಿನಾಚರಣೆಗೆ ಜಿಲ್ಲಾಡಳಿತದಿಂದ ಅಡಚಣೆ ಪ್ರತಿಬಾರಿಯೂ ಬರುತ್ತದೆ. ಈಗಲೂ ಹಾಗೆ ಆಗಿದೆ. ನಮ್ಮ ಕರಾಳ ದಿನಾಚಾರಣೆ ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ' ಎಂದು ಸಭೆಯಲ್ಲಿ ಮಾತನಾಡಿದ್ದಾರೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವದ ದಿನವೇ ಕರಾಳ ದಿನಾಚಾರಣೆ ಆಚರಿಸುವ ಎಂಇಎಸ್ ಮುಖಂಡರ ನಿರ್ಣಯ ಕನ್ನಡಿಗರನ್ನು ಕೆರಳಿಸುವಂತೆ ಮಾಡಿದೆ. ಬೆಳಗಾವಿ ಜಿಲ್ಲಾಡಳಿತ ಕೂಡಲೇ ಎಂಇಎಸ್ ಪುಂಡರ ಉದ್ಧಟತನಕ್ಕೆ ಬ್ರೇಕ್ ಹಾಕಬೇಕು ಎನ್ನುವುದು ಸ್ಥಳೀಯ ಕನ್ನಡಿಗರ ಆಗ್ರಹವಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications