ಬೆಳಗಾವಿಯಲ್ಲಿ ಮುಂದುವರೆದ ಎಂಇಎಸ್ ಪುಂಡಾಟಿಕೆ
ಬೆಳಗಾವಿ, ಜು. 28 : ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದೆ. ಸೋಮವಾರ ಐದು ಗ್ರಾಮಗಳಲ್ಲಿ ಮರಾಠಿ ನಾಮಫಲಕಗಳನ್ನು ಹಾಕಲಾಗಿದೆ. ಮರಾಠಿ ನಾಮಫಲಕದ ಕುರಿತ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಆ.4ಕ್ಕೆ ಮುಂದೂಡಿದೆ.
ಎಂಇಎಸ್ ಕಾರ್ಯಕರ್ತರು ಸೋಮವಾರ ಗಾರ್ಲ್ ಗುಂಜಿ, ಕುಪ್ಪಟಗಿರಿ, ನಿಡುಗಲ್ಲು, ಹಲಸವಾಡಿ ಹಾಗೂ ಸಣ್ಣ ಹೊಸೂರು ಗ್ರಾಮಗಳಲ್ಲಿ ಮರಾಠಿ ನಾಮಫಲಕ ಹಾಕಿದ್ದಾರೆ. ಎಳ್ಳೂರಿನಲ್ಲಿ ಅಕ್ರಮವಾಗಿ ಮರುಸ್ಥಾಪಿಸಿದ್ದ ಮರಾಠಿ ನಾಮಫಲಕವನ್ನು ಭಾನುವಾರ ಜಿಲ್ಲಾಡಳಿತ ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿತ್ತು.

ಇದರಿಂದ ಆಕ್ರೋಶಗೊಂಡಿರುವ ಎಂಇಎಸ್ ಕಾರ್ಯಕರ್ತರು ಇಂದು ಮತ್ತೆ ಮರಾಠಿ ನಾಮಫಲಕವನ್ನು ಹಾಕುವ ಮೂಲಕ ಪುಂಡಾಟಿಕೆ ಮುಂದುವರೆಸಿದ್ದಾರೆ. ಎಳ್ಳೂರು ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆ. [ಕನ್ನಡಿಗರ ವಿರುದ್ಧ 'ಉದ್ಧವ್' ಉದ್ಧಟತನ ಮಾತು]
ವಿಚಾರಣೆ ಮುಂದೂಡಿಕೆ : ಮರಾಠಿ ನಾಮಫಲಕ ಹಾಕಿರುವ ಕುರಿತು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಣ್ಣ ಗಡಾದ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ನಡೆಸಿದ್ದು, ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ.
ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಗೆ ಹೇಳಿಕೆ ನೀಡಿರುವ ಸರ್ಕಾರಿ ವಕೀಲರು, ನಾಮ ಫಲಕಗಳನ್ನು ಜಿಲ್ಲಾಡಳಿತದ ವತಿಯಿಂದ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಅರ್ಜಿಯ ವಿಚಾರಣೆಯನ್ನು ಆ.4ರಂದು ಹೈಕೋರ್ಟ್ ಪುನಃ ಕೈಗೆತ್ತಿಕೊಳ್ಳಲಿದೆ. [ಬೆಳಗಾವಿಯಲ್ಲಿ ಏನಾಗುತ್ತಿದೆ?]
ಪರಿಷತ್ತಿನಲ್ಲಿ ಪ್ರತಿಧ್ವನಿ : ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಬಗ್ಗೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ತಿನಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ಸೋಮವಾರದ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸರ್ಕಾರ ಪುಂಡಾಟಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಮಾಡಿದ್ದಾರೆ. ಪ್ರಶ್ನೋತ್ತರ ಕಲಾಪದ ನಂತರ ಈ ಬಗ್ಗೆ ಪರಿಷತ್ತಿನಲ್ಲಿ ಚರ್ಚೆ ನಡೆಯಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications