ಕನ್ನಡ ಧ್ವಜ ತೆರವುಗೊಳಿಸಲು ಆಗ್ರಹಿಸಿ ಮಾರ್ಚ್ 8ರಂದು ಎಂಇಎಸ್ ಪ್ರತಿಭಟನೆ
ಬೆಳಗಾವಿ, ಮಾರ್ಚ್ 6: ಕನ್ನಡ ಧ್ವಜಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೆ ತಗಾದೆ ತೆಗೆದಿದೆ. ಮಹಾನಗರ ಪಾಲಿಕೆ ಎದುರು ಸ್ಥಾಪಿಸಿರುವ ಕನ್ನಡ ಧ್ವಜ ತೆರವುಗೊಳಿಸಬೇಕು. ಇಲ್ಲದಿದ್ದರೆ ಪಾಲಿಕೆಯ ಮುಂದೆ ಭಗವಾಧ್ವಜ ಹಾರಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿರುವ ಎಂಇಎಸ್, ಮಾರ್ಚ್ 8ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.
ಎಂಇಎಸ್ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
'ಪಾಲಿಕೆ ಎದುರು ಇರುವ ಧ್ವಜ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಮರಾಠಾ ಸಮಾಜ ಹಾಗೂ ಎಂಇಎಸ್ ಮುಖಂಡರು ನನ್ನನ್ನು ಭೇಟಿಯಾಗಿದ್ದರು. ಅವರು ಉದ್ದೇಶಿಸಿರುವ ಮೆರವಣಿಗೆಯನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ. ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಕೂಡ ಮಾತುಕತೆ ನಡೆಸಿ ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು' ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಶಿವಸೇನಾ ಮುಖಂಡ ವಿಜಯ ದೇವಣೆ ಮತ್ತು ಬೆಂಬಲಿಗರು ಮಾರ್ಚ್ 7ರ ಬೆಳಿಗ್ಗೆ 6 ರಿಂದ ಮಾರ್ಚ್ 9ರ ಬೆಳಿಗ್ಗೆ 6ರವರೆಗೆ ಗಡಿಯೊಳಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ವಿಜಯ ದೇವಣೆ ಹಾಗೂ ಅವರ ಬೆಂಬಲಿಗರು ಮಾರ್ಚ್ 8ರಂದು ನಡೆಯಲಿರುವ ಎಂಇಎಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಭಾಷಾ ಸಂಘರ್ಷಕ್ಕೆ ಅವಕಾಶಮಾಡಿಕೊಡುವ ಸಾಧ್ಯತೆ ಇದೆ. ಇದರ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಜಿಲ್ಲೆಯಲ್ಲಿ ಅಹಿತಕರ ವಾತಾವರಣ ನಿರ್ಮಾಣವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕನ್ನಡಪರ ಸಂಘಟನೆಗಳು ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನಾ ಆಯೋಜಿಸಿರುವ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಶನಿವಾರ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications