Lakshmi Hebbalkar: ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ, ಮೆದುಳು ಬಾವು

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Minister Lakshmi Hebbalkar car accident in belagavi

ಬೆಳಗಾವಿಯಿಂದ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕಾರಿನಲ್ಲಿದ್ದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಲ್​ಪಿ ಸಭೆ ಮುಗಿಸಿ ನಿನ್ನೆ (ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದ್ದು, ಇಂದು ಬೆಳಗಿನಜಾವ 6 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಆಗಮಿಸಿದ್ದು, ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನೂ ಅಪಘಾತದ ಸುದ್ದಿ ತಿಳಿದು ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸುದ್ದಿ ತಿಳಿದು ಗೃಹ ಸಚಿವರಾದ ಡಾ ಜಿ ಪರಮೇಶ್ವರ್‌ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಗೆ ಕರೆ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಒಳ್ಳೆಯ ಚಿಕಿತ್ಸೆ ಕೊಡಿಸುವಂತೆ ಹೇಳಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಹೆಬ್ಬಾಳ್ಕರ್ ಹಾಗೂ, ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆನ್ನು ಮೂಳೆಗೆ ಬಲವಾದ ಪೆಟ್ಟಾಗಿದ್ದು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆ ಆರು ಗಂಟೆಗೆ ಅಪಘಾತ ಸಂಭವಿಸಿದ್ದು. ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆ‌ ಭಾಗದಲ್ಲಿ ಬಲವಾದ ಪೆಟ್ಟಾಗಿದ್ದು, ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದರು.

ನಿನ್ನೆ (ಸೋಮವಾರ) ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಐಸಿಸಿ ಮಾಧ್ಯಮ ಕಾರ್ಯದರ್ಶಿ ಜೈರಾಮ್ ರಮೇಶ್, ಸಚಿವ ಸಂಪುಟ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+