ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಾನವೀಯ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದ ವಿರುದ್ಧ ಜಾರಕಿಹೊಳಿ ಕಿಡಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್‌ 17: ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತ ವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿರುವ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೈಕಲ್ ಮೇಲೆ ಮೃತದೇಹವನ್ನು ಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನು ಗೌರವಯುತವಾಗಿ ಮಾಡಬೇಕು. ಕೊರೊನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು ಎಂದರು.

ಕೃಷ್ಣಾ ನದಿ ಪ್ರವಾಹ ಚರ್ಚೆಗೆ ಮಹಾರಾಷ್ಟ್ರಕ್ಕೆ ತೆರಳಿದ ರಾಜ್ಯ ನಿಯೋಗಕೃಷ್ಣಾ ನದಿ ಪ್ರವಾಹ ಚರ್ಚೆಗೆ ಮಹಾರಾಷ್ಟ್ರಕ್ಕೆ ತೆರಳಿದ ರಾಜ್ಯ ನಿಯೋಗ

ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಈ ಕುರಿತು ಮಾತನಾಡಿದ್ದೇನೆ. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು‌ ಪ್ರತಿಕ್ರಿಯಿಸಿದರು.

Belagavi: Minister Ramesh Jarkiholi Condemn Inhuman Funeral Of Person

ನಡ್ಡಾ ಭೇಟಿಯಾದ ಸಚಿವ; ದೆಹಲಿಯ ‌ಬಿಜೆಪಿ ಕೇಂದ್ರ ‌ಕಚೇರಿಯಲ್ಲಿಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಚಿವ ಜಾರಕಿಹೊಳಿ ಭೇಟಿಯಾದರು.

ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಕೆಲಹೊತ್ತು ಮಾತು ಕತೆ ನಡೆಸಿದರು. ರಾಷ್ಟ್ರೀಯ ಜಲ ನೀತಿ ರೂಪಿಸಿ ನದಿ ಜೋಡಣೆ ಹಾಗೂ ವಿವಿಧ ಕಾರ್ಯಕ್ರಮ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಪಕ್ಷ ಸಂಘಟನೆಗೆ ಆದ್ಯತೆ ನೀಡಿ ಜನಸಾಮಾನ್ಯರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟನೆ ಮಾಡುವಂತೆ ನಡ್ಡಾ ಅವರು ಜಾರಕಿಹೊಳಿ ಅವರಿಗೆ ಸಲಹೆ ನೀಡಿದರು.

English summary
Belagavi district incharge minister Ramesh jarkiholi has condemned the incident of inhuman funeral in which a person deadbody was taken on a bicycle to funeral in Mk Hubballi of Kittur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X