ಬೆಳಗಾವಿ ಗಲಭೆಗೆ ಶಾಸಕ ಫಿರೋಜ್ ಸೇಠ್ ಕುಮ್ಮಕ್ಕು: ಮುತಾಲಿಕ್
ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ನಡುವಿನ ಏರ್ಪಟ್ಟ ಸಣ್ಣ ಜಗಳ ಕೋಮು ಗಲಭೆಯಾಗಿ ಮಾರ್ಪಟ್ಟು ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ.
ಗಲಭೆಯಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಬಿದ್ದಿದ್ದು, ಕಲ್ಲುತೂರಾಟದಿಂದ ಎಸಿಪಿ ಶಂಕರ ಮಾರಿಹಾಳ ಅವರು ತೀರ್ವವಾಗಿ ಗಾಯಗೊಂಡಿದ್ದಾರೆ, ನಿನ್ನೆ ರಾತ್ರಿ ಸಣ್ಣ ಜಗಳವಾಗಿ ಪ್ರಾರಂಭವಾಗಿ ಪ್ರಾರಂಭಗೊಂಡದ್ದು ಇಂದು ಬೆಳಿಗ್ಗೆ ವೇಳೆಗೆ ಕೋಮು ಗಲಭೆಯಾಗಿ ಬದಲಾವಣೆ ಹೊಂದಿಬಿಟ್ಟಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ 'ಗಲಭೆ ಹಿಂದೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ಕುಮ್ಮಕ್ಕಿದೆ' ಎಂದಿದ್ದಾರೆ.

ಕ್ಷೇತ್ರವನ್ನು ತಮ್ಮ ಮತಕ್ಷೇತ್ರವನ್ನಾಗಿ ಪರಿವರ್ತಿಸಿಕೊಳ್ಳಲು ಮಾಡಿರುವ ಹುನ್ನಾರ ಇದು ಎಂದಿರುವ ಅವರು, ಬೆಳಗಾವಿಯಲ್ಲಿ ಎಂಐಎಂ (ಮುಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್) ಸಂಘಟನೆ ಕೆಲಸ ಮಾಡುತ್ತಿದೆ, ಇಲ್ಲಿನ ಸ್ಥಳೀಯ ಕಾರ್ಪೊರೇಟರ್ ಒಬ್ಬರು ಭೂಗತ ಪಾತಕಿ ರಶೀದ್ ಮಲಬಾರಿಗೆ ಸಹಾಯ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.
ಬಾಂಗ್ಲಾದೇಶಿಗರಿಗೆ ಇಲ್ಲಿ ಆಶ್ರಯ ನೀಡಿ ಓಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ, ಇಲ್ಲಿ ಹಿಂದೂಗಳಿಂದ ಗಲಾಟೆ ಆಗುತ್ತಿಲ್ಲ, ಮುಸ್ಲಿಂ ಕೀಡಿಗೇಡಿಗಳಿಂದ ಗಲಭೆ ಆಗುತ್ತಿದೆ ಆದರೆ ಉತ್ತರ ಕ್ಷೇತ್ರದ ಶಾಸಕರು ಪೊಲೀಸರ ಕೈಕಟ್ಡಿ ಹಾಕುವ ಕೆಲಸ ಮಾಡುತ್ತಿದ್ದಾರೆ, ಇವೆಲ್ಲವೂ ಉತ್ತರ ಕ್ಷೇತ್ರದ ಶಾಸಕರ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಫಿರೋಜ್ ಸೇಠ್ ಮೇಲೆ ಗಂಭೀರ ಆರೋಪ ಮಾಡಿದರು.
ರಾಜ್ಯದ ಬಿಜೆಪಿ ನಾಯಕರನ್ನು ದೂರಿದ ಅವರು ಚುನಾವಣಾ ಹತ್ತಿರವಿದ್ದಾಗ ಮಾತ್ರ ಹಿಂದುತ್ವದ ಮುಖವಾಡ ಹಾಕಿಕೊಳ್ಳುತ್ತಾರೆ, ಬಿಜೆಪಿ ನಾಯಕರು ರಾಜಕೀಯ ಸ್ವಾರ್ಥಕ್ಕಾಗಿ ಬೂಟಾಡಿಕೆ ಮಾಡುತ್ತಿದ್ದಾರೆಂದು ಕಿಡಿಕಾರಿದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications