ಜನತಾ ಕರ್ಫ್ಯೂ ದಿನವೇ ಮಗನ ನಿಶ್ಚಿತಾರ್ಥ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಮಾರ್ಚ್ 23: ಕೊರೊನಾ ವೈರಸ್ ತಡೆಗಟ್ಟುವ ಪ್ರಯತ್ನವಾಗಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದರು. ಯಾರೂ ಮನೆ ಬಿಟ್ಟು ಹೊರಗೆ ಬರದಂತೆ, ಆ ಮೂಲಕ ಕೊರೊನಾ ತಡೆಯುವ ಪ್ರಯತ್ನ ಮಾಡುವಂತೆ ಮನವಿ ಮಾಡಿದ್ದರು. ಜನರೂ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದರು.
ಆದರೆ ಜನತಾ ಕರ್ಫ್ಯೂ ಇದ್ದರೂ ಈ ನಡುವೆಯೇ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಮಗನ ನಿಶ್ಚಿತಾರ್ಥ ಕಾರ್ಯಕ್ರಮ ಮಾಡಿದ್ದಾರೆ. ತಮ್ಮ ಮಗ ಮೃನಾಲ್ ಹೆಬ್ಬಾಳ್ಕರ್ ನಿಶ್ಚಿತಾರ್ಥವನ್ನು ನಿನ್ನೆ ನೆರವೇರಿಸಿದ್ದಾರೆ.

ಬೆಳಗಾವಿಯ ಕುವೆಂಪು ನಗರದ ತಮ್ಮ ನಿವಾಸದ ಮುಂಭಾಗದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃನಾಲ್ ಹಾಗೂ ಭದ್ರಾವತಿ ಶಾಸಕ ಸಂಗಮೇಶ ಪುತ್ರಿ ಜೊತೆಗೆ ನಿನ್ನೆ ನಿಶ್ಚಿತಾರ್ಥ ನಡೆದಿದೆ. ಕಾರ್ಯಕ್ರಮಕ್ಕೆ ಕುಟುಂಬದ ಸದಸ್ಯರು ಸೇರಿದಂತೆ ಹಲವು ಆಪ್ತರಿಗೆ ಆಹ್ವಾನ ನೀಡಿದ್ದರು. ಕಾರ್ಯಕ್ರಮದಲ್ಲಿ ಕರ್ಫ್ಯೂ ನಡುವೆಯೂ 300ಕ್ಕೂ ಅಧಿಕ ಜನರು ಭಾಗಿಯಾಗಿದ್ದರು ಎನ್ನಲಾಗಿದೆ.












Click it and Unblock the Notifications