ನಾಪತ್ತೆಯಾಗಿದ್ದ ಶಾಸಕ ಮಹೇಶ್ ಕುಮಟಳ್ಳಿ ಕೊನೆಗೂ ಕ್ಷೇತ್ರಕ್ಕೆ ವಾಪಸ್!
ಚಿಕ್ಕೋಡಿ, ಜನವರಿ 25: ಕಳೆದ 15-20 ದಿನಗಳಿಂದಲೂ ನಾಪತ್ತೆಯಾಗಿದ್ದ ಅಥಣಿಯ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಅವರು ನಿನ್ನೆ ರಾತ್ರಿ ಸ್ವಕ್ಷೇತ್ರಕ್ಕೆ ವಾಪಸ್ಸಾಗಿದ್ದಾರೆ.
ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಮುಂಬೈನ ಪಂಚತಾರಾ ಹೊಟೆಲ್ ಸೇರಿ ಬಿಜೆಪಿಗೆ ಹಾರಲು ಸಜ್ಜಾಗಿದ್ದ ಅವರು ಕಳೆದ 15-20 ದಿನಗಳಿಂದಲೂ ಕ್ಷೇತ್ರಕ್ಕೆ ಕಾಲಿಟ್ಟಿರಲಿಲ್ಲ.
ನಿನ್ನೆ ಕ್ಷೇತ್ರಕ್ಕೆ ವಾಪಸ್ಸಾಗಿರುವ ಅವರು, ನನಗೆ ಬೆನ್ನು ನೋವಿತ್ತು ಹಾಗಾಗಿ ಮುಂಬೈಗೆ ಚಿಕಿತ್ಸೆಗೆ ಹೋಗಿದ್ದೆ ಎಂದು ಸಬೂಬು ಹೇಳಿದ್ದಾರೆ.

ನಮ್ಮ ನಾಯಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಮೇಲೆ ಮುನಿಸಿದ್ದಿದ್ದು ನಿಜ, ಆದರೆ ಈಗ ಎಲ್ಲವೂ ಸರಿ ಹೋಗಿದೆ. ನಾವು ಯಾವುದೇ ಹಣ ಅಥವಾ ಅಧಿಕಾರದ ಆಮೀಷಕ್ಕೆ ಒಳಗಾಗಿ ಮುಂಬೈಗೆ ಹೋಗಿರಲಿಲ್ಲ ಎಂದು ಅವರು ಹೇಳಿದ್ದಾರೆ.
ನಾನು ಯಾವುದೇ ಸಮಿತಿ ಅಥವಾ ಸಚಿವ ಸ್ಥಾನ ಆಕಾಂಕ್ಷಿ ಅಲ್ಲ ಎಂದ ಅವರು, ನಾನು 25 ವರ್ಷಗಳಿಂದಲೂ ಕಾಂಗ್ರೆಸ್ ಕಾರ್ಯಕರ್ತ ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡುವುದಿಲ್ಲ. ಸಿಎಲ್ಪಿ ಸಭೆಗೆ ಹೋಗದೆ ಇರಲು ಬೆನ್ನುನೋವು ಕಾರಣವೇ ಹೊರತು ಬೇರೇನೂ ಅಲ್ಲ ಎಂದು ಅವರು ಹೇಳಿದರು.
ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಹುಡುಕಿಕೊಡಿ ಎಂದು ಫೇಸ್ಬುಕ್ ನಲ್ಲಿ ಪೋಸ್ಟ್ಗಳು ಹರಿದಾಡುತ್ತಿದ್ದವು. ಮಹೇಶ್ ಅವರು ಮಾತ್ರವಲ್ಲದೆ ಅತೃಪ್ತ ಶಾಸಕರಾದ ಉಮೇಶ್ ಜಾಧವ್, ಬಿ.ನಾಗೇಂದ್ರ ಅವರುಗಳು ಸಹ ತಮ್ಮ-ತಮ್ಮ ಕ್ಷೇತ್ರಗಳಿಗೆ ವಾಪಸ್ ಆಗಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications