ರಮೇಶ್ ಜಾರಕಿಹೊಳಿ, ಶಾಸಕ ಮಹೇಶ್ ಕುಮಟಳ್ಳಿ ಮಾತುಕತೆ: ಆಪರೇಷನ್ ಕಮಲ?

Recommended Video

      ಫಾರಿನ್ ಗೆ ಹೋಗಲು ಪಾಸ್ ಪೋರ್ಟ್ ಇಲ್ಲ..! ಅದಕ್ಕೆ ನೀರಿನ ಬಗ್ಗೆ ಚರ್ಚೆ..! Oneindia Kannada

      ಬೆಳಗಾವಿ, ಏಪ್ರಿಲ್ 29: ಕಾಂಗ್ರೆಸ್‌ ಭಿನ್ನಮತೀಯ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಶಾಸಕ ಮಹೇಶ್ ಕುಮಟಳ್ಳಿ ಅವರು ಇಂದು ಮಾತುಕತೆ ನಡೆಸಿದ್ದು, ಇದು ಆಪರೇಷನ್ ಕಮಲದ ಭೇಟಿಯೇ ಎಂಬ ಅನುಮಾನ ಮೂಡುತ್ತಿದೆ.

      ಕಾಂಗ್ರೆಸ್‌ಗೆ ರಾಜೀನಾಮೆ ನೀಡಲು ತುದಿಗಾಲಿನಲ್ಲಿ ನಿಂತಿರುವ ರಮೇಶ್ ಜಾರಕಿಹೊಳಿ ಅವರನ್ನು ಮಹೇಶ್ ಕುಮಟಳ್ಳಿ ಅವರು ಭೇಟಿ ಮಾಡಿದ್ದು, ರಮೇಶ್ ಜಾರಕಿಹೊಳಿ ಜೊತೆಗೆ ಅವರ ಬೆಂಬಲಿಗರಾಗಿರುವ ಮಹೇಶ್ ಕುಮಟಳ್ಳಿ ಅವರು ರಾಜೀನಾಮೆ ನೀಡುತ್ತಾರೆಯೇ ಎಂಬ ಅನುಮಾನ ಮೂಡಿಸಿದೆ.

      ಮಹೇಶ್ ಕುಮಟಳ್ಳಿ ಅವರು ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರಾಗಿದ್ದು, ಈ ಹಿಂದೆ ಕಾಂಗ್ರೆಸ್‌ ಜೊತೆ ಮುನಿಸಿಕೊಂಡು ರಮೇಶ್ ಜಾರಕಿಹೊಳಿ ಅವರು ಮುಂಬೈನ ರೆಸಾರ್ಟ್‌ಗೆ ತೆರಳಿದ್ದಾಗ ಅವರೊಂದಿಗೆ ತೆರಳಿದ್ದ ಶಾಸಕರಲ್ಲಿ ರಮೇಶ್ ಜಾರಕಿಹೊಳಿ ಅವರು ಸಹ ಒಬ್ಬರಾಗಿದ್ದರು.

       MLA Mahesh Kumtalli met dissident MLA Ramesh Jarkiholi

      ರಮೇಶ್ ಜಾರಕಿಹೊಳಿ ಅವರು ವಿದೇಶಕ್ಕೆ ಹೊರಡುತ್ತಿದ್ದಾರೆಂಬ ಸುದ್ದಿಯೊಂದು ಸಹ ಹರಿದಾಡುತ್ತಿದ್ದು, ಅವರು ತಮ್ಮೊಂದಿಗೆ ಭಿನ್ನಪತೀಯ ಶಾಸಕರನ್ನು ಕೊಂಡೊಯ್ಯುತ್ತಾರೆ ಎನ್ನಲಾಗಿದೆ. ಹಾಗಾಗಿಯೇ ಮಹೇಶ್ ಕುಮಟಳ್ಳಿ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗುತ್ತಿದೆ.

      ರಮೇಶ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ಫಾರಿನ್‌ಗೆ ಹೋಗಲು ನನ್ನ ಬಳಿ ಪಾಸ್‌ಪೋರ್ಟ್‌ ಇಲ್ಲ ಎಂದು ಸಿಟ್ಟಿನಿಂದ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಅವರನ್ನು ಭೇಟಿಯಾಗಿ ನಮ್ಮ ಭಾಗಕ್ಕೆ ಕೃಷ್ಣ ನದಿ ನೀರು ಹೇಗೆ ತರುವುದೆಂದು ಚರ್ಚೆ ಮಾಡಿದ್ದೇನೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+