ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತ್ಯೇಕ ರಾಜ್ಯ ಹೋರಾಟದಲ್ಲಿ ಸ್ವಾರ್ಥವಿಲ್ಲ: ಕತ್ತಿ

By Mahesh
|
Google Oneindia Kannada News

MLA Umesh Katti defends his statement on Bifurcation Karnataka
ಬೆಳಗಾವಿ, ಸೆ.15: ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ, ಪ್ರತ್ಯೇಕ ರಾಜ್ಯ ಹೋರಾಟ ಮಾತ್ರ ಕೈಬಿಡು ವುದಿಲ್ಲ. ಇದು ನನ್ನ ಆಜನ್ಮ ಸಿದ್ಧ ಹಕ್ಕು, ಇದರಲ್ಲಿ ಯಾವುದೇ ಸ್ವಾರ್ಥವಿಲ್ಲ. ನನ್ನ ಹೇಳಿಕೆಯನ್ನು ನಾನು ಹಿಂಪಡೆಯುವುದಿಲ್ಲ, ಯಾರನ್ನೂ ಕ್ಷಮೆಯಾಚನೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕವನ್ನು ವಿಭಜಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದಾನೆ, ಅಚಲವಾಗಿದ್ದೇನೆ. ನನ್ನ ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ. ನನ್ನ ಹೋರಾಟ ಮಾತ್ರ ಕೈಬಿಡುವುದಿಲ್ಲ ಎಂದರು.[ಕತ್ತಿ ವಿರುದ್ಧ ನಾಯಕರು ಗರಂ]

ಹೋರಾಟಗಾರರ ಮನೆತನದಲ್ಲೇ ಹುಟ್ಟಿದ ನಾನು, ಅಖಂಡ ಕರ್ನಾಟಕದ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ಮಾತನಾಡುವವರಿಂದ ಪಾಠ ಕಲಿಯಬೇಕಿಲ್ಲ. ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಿದರೆ ನಾನು ಸುಮ್ಮನಿರುವುದಿಲ್ಲ. ಹೋರಾಟ ಮಾಡಿಯೇ ತೀರುತ್ತೇನೆ. ಇದು ಪಕ್ಷದ ಅಜೆಂಡಾವಲ್ಲ ನನ್ನ ವೈಯಕ್ತಿಕ ಹೋರಾಟ, ಸ್ವಾರ್ಥ ಸಾಧನೆ ಏನು ಇಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡಿ ಇಲ್ಲವೇ ಪ್ರತ್ಯೇಕ ರಾಜ್ಯ ಸ್ಥಾಪನೆಗೆ ಅನುವು ಮಾಡಿಕೊಡಿ ಇಷ್ಟೇ ನಮ್ಮ ಬೇಡಿಕೆ ಎಂದರು.

ನನ್ನ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಹೋರಾಟ ಮಾಡಿಯೇ ತೀರುತ್ತೇನೆ. ಯಾವುದೇ ರಾಜಕೀಯ ದುರು ದ್ದೇಶದಿಂದ ಈ ಹೋರಾಟದ ಹಾದಿಯನ್ನು ಹಿಡಿದಿಲ್ಲ ಎಂದರು. ಕಡೆಗಣಿಸಲಾಗಿರುವ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನನ್ನ ಬಗ್ಗೆ ಯಾರೂ ಏನು ಬೇಕಾದರೂ ಮಾತನಾಡಿಕೊಳ್ಳಲಿ. ನನಗೆ ಅದರ ಬಗ್ಗೆ ಚಿಂತೆಯಿಲ್ಲ. ಕ್ಷೇತ್ರದ ಅಭಿವೃದ್ಧಿಯೇ ನನಗೆ ಮುಖ್ಯ. ಆದ್ದರಿಂದ ಈ ದೃಢ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ರಾಜ್ಯ ವಿಂಗಡನೆ ಕುರಿತು ಮಾತನಾಡಿದ್ದ ಮಾಜಿ ಸಚಿವ ಉಮೇಶ್ ಕತ್ತಿ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದು, ನಟ ಮತ್ತು ಎಂಎಲ್‌ಸಿ ಸದಸ್ಯ ಜಗ್ಗೇಶ್ ಅವರು ಕಿಡಿಕಾರಿದ್ದರು.

ಉಮೇಶ್ ಕತ್ತಿ ಹುಳಿ ಇದ್ದಂತೆ, ಕನ್ನಡಿಗರು ಹಾಲು ಇದ್ದಂತೆ. ಹೀಗಾಗಿ ಕತ್ತಿ ಅವರ ಬಗ್ಗೆ ಎಚ್ಚರದಿಂದಿರಬೇಕು. ಅಖಂಡ ಕರ್ನಾಟಕವನ್ನು ಒಡೆಯುವ ಮಾತುಗಳನ್ನಾಡುತ್ತಿರುವ ಉಮೇಶ್ ಕತ್ತಿ ಅವರಂತಹವರ ಬಗ್ಗೆ ನಾವು ಎಚ್ಚರದಿಂದಿರಬೇಕು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿದ್ದು, ಈಗಲಾದರೂ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

English summary
The former Minister and Hukkeri BJP MLA Umesh Katti has reiterated his demand to carve out a separate north Karnataka State with Belgaum as its capital. Today he defended his statement and urged Siddaramaiah government to concentrate on developing North Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X