ಪ್ರತ್ಯೇಕ ರಾಜ್ಯ ರಚನೆ ಹೋರಾಟಕ್ಕೆ 24 ಸಂಘಟನೆಗಳ ಬೆಂಬಲ: ಭೀಮಪ್ಪ ಗಡಾದ

ಬೆಳಗಾವಿ, ಜುಲೈ 30: ಸವರ್ಣಸೌಧದ ಮುಂದೆ ನಾಳೆ ನಡೆಯುವ ಹೋರಾಟಕ್ಕೆ 24 ಸಂಘಟನೆಗಳು ಬೆಂಬಲ ನೀಡಿವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸ್ವಾಮೀಜಿಗಳು ಅನುಮತಿ ನೀಡಿದರೆ ಸುವರ್ಣಸೌಧದ ಮುಂದೆಯೇ ಉತ್ತರ ಕರ್ನಾಟಕ ಹೋರಾಟ ಸಮಿತಿಂದ ಉತ್ತರ ಕರ್ನಾಟಕದ ಧ್ವಜ ಹಾರಿಸುವುದಾಗಿ ಅವರು ಹೇಳಿದರು.

ಪ್ರತ್ಯೇಕ ಧ್ವಜದಲ್ಲಿ ಕೇಸರಿ ಹಳದಿ ಹಸಿರು ಮಧ್ಯದಲ್ಲಿ ಉತ್ತರ ಕರ್ನಾಟಕದ ಲಾಂಛನವಿರುತ್ತೆ ಎಂದು ಮಾಹಿತಿ ನೀಡಿದ ಅವರು, ಸುವರ್ಣ ಸೌಧಕ್ಕೆ ಕಾಯಕಲ್ಪ ಕೊಡಬೇಕು, ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದರು.

more than 100 swamijis will participate in protest about separate state

ನಿಡಸೋಶಿ ಮಠದ ಪಂಚಮಲಿಂಗೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ, ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದ್ದು ಸುಮಾರು ನೂರಕ್ಕೂ ಅಧಿಕ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ ಎಂದು ಅವರು ಹೇಳಿದರು.

ಯಡಿಯೂರಪ್ಪ ಅವರು ಪ್ರತ್ಯೇಕ ರಾಜ್ಯ ಬೇಡವೆಂದು ಮನವೊಲಿಸಲು ಬೆಳಗಾವಿಗೆ ಆಗಮಿಸುತ್ತಿರುವ ಬಗ್ಗೆ ಮಾತನಾಡಿದ ಅವರು, 'ಯಡಿಯೂರಪ್ಪ ಅವರು ಬಂದರೆ ನಮ್ಮ ಸ್ವಾಗತವಿದೆ' ಎಂದು ಹೇಳಿದರು.

ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬಲ ಬರಲು ಮಾಧ್ಯಮಗಳೇ ಕಾರಣ ಎಂಬ ಕುಮಾರಸ್ವಾಮಿ ಅವರ ಮಾತನ್ನು ತಳ್ಳಿ ಹಾಕಿದ ಭೀಮಪ್ಪ ಗಡಾದ ಅವರು, 'ನಾವು ಹೇಳಿದ್ದನ್ನೇ ಮಾಧ್ಯಮದವರು ಬಿತ್ತರಿಸುತ್ತಾರೆ, ಮಾದ್ಯಮಗಳ ಬಗ್ಗೆ ಹೇಳಿಕೆಕೊಡುವ ಮೊದಲು ಯೋಚಿಸಿ ಹೇಳಿಕೆ ಕೊಡಬೇಕು ಸಿಎಂ ಇರಲಿ ಅಥವಾ ಪಿಎಂ ಇರಲಿ ಮಾದ್ಯಮಗಳ ಬಗ್ಗೆ ಹಗುರವಾಗಿ ಹೇಳಿಕೆ ಕೊಡಬಾರದು' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+