ಪ್ರತ್ಯೇಕ ರಾಜ್ಯ ರಚನೆ ಹೋರಾಟಕ್ಕೆ 24 ಸಂಘಟನೆಗಳ ಬೆಂಬಲ: ಭೀಮಪ್ಪ ಗಡಾದ
ಬೆಳಗಾವಿ, ಜುಲೈ 30: ಸವರ್ಣಸೌಧದ ಮುಂದೆ ನಾಳೆ ನಡೆಯುವ ಹೋರಾಟಕ್ಕೆ 24 ಸಂಘಟನೆಗಳು ಬೆಂಬಲ ನೀಡಿವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸ್ವಾಮೀಜಿಗಳು ಅನುಮತಿ ನೀಡಿದರೆ ಸುವರ್ಣಸೌಧದ ಮುಂದೆಯೇ ಉತ್ತರ ಕರ್ನಾಟಕ ಹೋರಾಟ ಸಮಿತಿಂದ ಉತ್ತರ ಕರ್ನಾಟಕದ ಧ್ವಜ ಹಾರಿಸುವುದಾಗಿ ಅವರು ಹೇಳಿದರು.
ಪ್ರತ್ಯೇಕ ಧ್ವಜದಲ್ಲಿ ಕೇಸರಿ ಹಳದಿ ಹಸಿರು ಮಧ್ಯದಲ್ಲಿ ಉತ್ತರ ಕರ್ನಾಟಕದ ಲಾಂಛನವಿರುತ್ತೆ ಎಂದು ಮಾಹಿತಿ ನೀಡಿದ ಅವರು, ಸುವರ್ಣ ಸೌಧಕ್ಕೆ ಕಾಯಕಲ್ಪ ಕೊಡಬೇಕು, ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದರು.

ನಿಡಸೋಶಿ ಮಠದ ಪಂಚಮಲಿಂಗೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ, ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದ್ದು ಸುಮಾರು ನೂರಕ್ಕೂ ಅಧಿಕ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ ಎಂದು ಅವರು ಹೇಳಿದರು.
ಯಡಿಯೂರಪ್ಪ ಅವರು ಪ್ರತ್ಯೇಕ ರಾಜ್ಯ ಬೇಡವೆಂದು ಮನವೊಲಿಸಲು ಬೆಳಗಾವಿಗೆ ಆಗಮಿಸುತ್ತಿರುವ ಬಗ್ಗೆ ಮಾತನಾಡಿದ ಅವರು, 'ಯಡಿಯೂರಪ್ಪ ಅವರು ಬಂದರೆ ನಮ್ಮ ಸ್ವಾಗತವಿದೆ' ಎಂದು ಹೇಳಿದರು.
ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬಲ ಬರಲು ಮಾಧ್ಯಮಗಳೇ ಕಾರಣ ಎಂಬ ಕುಮಾರಸ್ವಾಮಿ ಅವರ ಮಾತನ್ನು ತಳ್ಳಿ ಹಾಕಿದ ಭೀಮಪ್ಪ ಗಡಾದ ಅವರು, 'ನಾವು ಹೇಳಿದ್ದನ್ನೇ ಮಾಧ್ಯಮದವರು ಬಿತ್ತರಿಸುತ್ತಾರೆ, ಮಾದ್ಯಮಗಳ ಬಗ್ಗೆ ಹೇಳಿಕೆಕೊಡುವ ಮೊದಲು ಯೋಚಿಸಿ ಹೇಳಿಕೆ ಕೊಡಬೇಕು ಸಿಎಂ ಇರಲಿ ಅಥವಾ ಪಿಎಂ ಇರಲಿ ಮಾದ್ಯಮಗಳ ಬಗ್ಗೆ ಹಗುರವಾಗಿ ಹೇಳಿಕೆ ಕೊಡಬಾರದು' ಎಂದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications