ಪ್ರತ್ಯೇಕ ರಾಜ್ಯ ರಚನೆ ಹೋರಾಟಕ್ಕೆ 24 ಸಂಘಟನೆಗಳ ಬೆಂಬಲ: ಭೀಮಪ್ಪ ಗಡಾದ
ಬೆಳಗಾವಿ, ಜುಲೈ 30: ಸವರ್ಣಸೌಧದ ಮುಂದೆ ನಾಳೆ ನಡೆಯುವ ಹೋರಾಟಕ್ಕೆ 24 ಸಂಘಟನೆಗಳು ಬೆಂಬಲ ನೀಡಿವೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸ್ವಾಮೀಜಿಗಳು ಅನುಮತಿ ನೀಡಿದರೆ ಸುವರ್ಣಸೌಧದ ಮುಂದೆಯೇ ಉತ್ತರ ಕರ್ನಾಟಕ ಹೋರಾಟ ಸಮಿತಿಂದ ಉತ್ತರ ಕರ್ನಾಟಕದ ಧ್ವಜ ಹಾರಿಸುವುದಾಗಿ ಅವರು ಹೇಳಿದರು.
ಪ್ರತ್ಯೇಕ ಧ್ವಜದಲ್ಲಿ ಕೇಸರಿ ಹಳದಿ ಹಸಿರು ಮಧ್ಯದಲ್ಲಿ ಉತ್ತರ ಕರ್ನಾಟಕದ ಲಾಂಛನವಿರುತ್ತೆ ಎಂದು ಮಾಹಿತಿ ನೀಡಿದ ಅವರು, ಸುವರ್ಣ ಸೌಧಕ್ಕೆ ಕಾಯಕಲ್ಪ ಕೊಡಬೇಕು, ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಬೇಕೆಂದು ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆ ಇದು ಎಂದರು.

ನಿಡಸೋಶಿ ಮಠದ ಪಂಚಮಲಿಂಗೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಸಿದ್ಧರಾಮ ಸ್ವಾಮೀಜಿ, ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದ್ದು ಸುಮಾರು ನೂರಕ್ಕೂ ಅಧಿಕ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ ಎಂದು ಅವರು ಹೇಳಿದರು.
ಯಡಿಯೂರಪ್ಪ ಅವರು ಪ್ರತ್ಯೇಕ ರಾಜ್ಯ ಬೇಡವೆಂದು ಮನವೊಲಿಸಲು ಬೆಳಗಾವಿಗೆ ಆಗಮಿಸುತ್ತಿರುವ ಬಗ್ಗೆ ಮಾತನಾಡಿದ ಅವರು, 'ಯಡಿಯೂರಪ್ಪ ಅವರು ಬಂದರೆ ನಮ್ಮ ಸ್ವಾಗತವಿದೆ' ಎಂದು ಹೇಳಿದರು.
ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬಲ ಬರಲು ಮಾಧ್ಯಮಗಳೇ ಕಾರಣ ಎಂಬ ಕುಮಾರಸ್ವಾಮಿ ಅವರ ಮಾತನ್ನು ತಳ್ಳಿ ಹಾಕಿದ ಭೀಮಪ್ಪ ಗಡಾದ ಅವರು, 'ನಾವು ಹೇಳಿದ್ದನ್ನೇ ಮಾಧ್ಯಮದವರು ಬಿತ್ತರಿಸುತ್ತಾರೆ, ಮಾದ್ಯಮಗಳ ಬಗ್ಗೆ ಹೇಳಿಕೆಕೊಡುವ ಮೊದಲು ಯೋಚಿಸಿ ಹೇಳಿಕೆ ಕೊಡಬೇಕು ಸಿಎಂ ಇರಲಿ ಅಥವಾ ಪಿಎಂ ಇರಲಿ ಮಾದ್ಯಮಗಳ ಬಗ್ಗೆ ಹಗುರವಾಗಿ ಹೇಳಿಕೆ ಕೊಡಬಾರದು' ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications