ಮಹಾರಾಷ್ಟ್ರದಲ್ಲಿ ಮಳೆ: ಕೃಷ್ಣಾ ನದಿಗೆ 65,000 ಕ್ಯೂಸೆಕ್ ನೀರು ಬಿಡುಗಡೆ
ಬೆಳಗಾವಿ, ಅಕ್ಟೋಬರ್ 15: ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯಾಗುತ್ತಿದ್ದು, ಕೃಷ್ಣಾ ನದಿಯ ಒಳಹರಿವಿನಲ್ಲಿ ಏರಿಕೆಯಾಗಿದೆ. ಹೀಗಾಗಿ ಮತ್ತೆ ಪ್ರವಾಹದ ಆತಂಕ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇದರಿಂದ ಕೃಷ್ಣಾ, ವೇದಗಂಗಾ ಮತ್ತು ದೂಧ್ಗಂಗಾ ನದಿಗಳ ಒಳಹರಿವಿನಲ್ಲೂ ಏರಿಕೆಯಾಗಿದೆ. ಕೃಷ್ಣಾ ನದಿಗೆ 65,000ಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ನಿಂದ 53,500 ಕ್ಯೂಸೆಕ್, ದೂಧ್ಗಂಗಾದಿಂದ 11,616 ಕ್ಯೂಸೆಕ್ ನೀರು ಹರಿಸಿದ್ದು, ಒಟ್ಟು 65,000 ಕ್ಯೂಸೆಕ್ಗೂ ಅಧಿಕ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ.
ಚಿಕ್ಕೋಡಿ - 86.4 ಮಿ.ಮೀ., ಅಂಕಲಿ - 68.8 ಮಿ.ಮೀ., ನಾಗರಮುನ್ನೊಳಿ - 48.6 ಮಿ.ಮೀ., ಸದಲಗಾ - 95 ಮಿ.ಮೀ., ಜೋಡಟ್ಟಿ - 50.5 ಮಿ.ಮೀ. ಮಳೆಯಾಗಿದೆ. ಸದ್ಯ ಕೊಯ್ನಾ ಜಲಾಶಯ ಶೇ. 99.39, ವಾರಣಾ ಜಲಾಶಯ ಶೇ. 100, ರಾಧಾನಗರಿ ಜಲಾಶಯ ಶೇ. 98.89, ಕಣೇರ ಜಲಾಶಯ ಶೇ.100, ಧೂಮ ಜಲಾಶಯ ಶೇ. 99.85, ಪಾಟಗಾಂವ ಶೇ. 100, ಧೂದ್ಗಂಗಾ ಶೇ. 100ರಷ್ಟು ತುಂಬಿದೆ. ಹಿಪ್ಪರಗಿ ಬ್ಯಾರೇಜ್ ನಿಂದ 68,000 ಹಾಗೂ ಆಲಮಟ್ಟಿ ಜಲಾಶಯದಿಂದ 1,17,000 ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ.

ಚಿಕ್ಕೋಡಿ ಉಪ ವಿಭಾಗದ ಶಿನಾಳ-ಕಾತ್ರಾಳ, ಕೌಲಗುಡ್ಡ-ಮೋಳೆ, ಕೆಂಪವಾಡ - ಮಿರಜ, ಶಿರೂರ -ಖೇಳೆಗಾಂವ, ಕಾತ್ರಾಳ - ತಂಗಡಿ, ಸಂಬರಗಿ-ಆಜೂರ ಬಿಜ್ಜರಗಿ - ತೇಲಸಂಗ, ಕೆಂಪವಾಡ - ಖಟಾವ ರಸ್ತೆಗೆ ನುಗ್ಗಿದ ನೀರಿನಿಂದ ಜನರಿಗೆ ತೊಂದರೆ ಉಂಟಾಗಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
-
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications