ಕನ್ನಡದ ಹೆಸರಲ್ಲಿ ಹೊಟ್ಟೆಪಾಡು, ವಾಟಾಳ್ ಬಂದ್ ಕರೆಗೆ ಸಂಸದ ಅಂಗಡಿ ವ್ಯಂಗ್ಯ
ಬೆಳಗಾವಿ, ಜೂನ್ 3: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಸಂಸದ ಸುರೇಶ್ ಅಂಗಡಿ ಹೊಟ್ಟೆಪಾಡಿನ ಹೋರಾಟಗಾರ ಎಂದು ಕರೆದಿದ್ದಾರೆ. ಕನ್ನಡದ ಹೆಸರಿನಲ್ಲಿ ಬಹಳ ಜನ ಹೊಟ್ಟೆ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇಂಥವರೆಲ್ಲ ಕರ್ನಾಟಕ ಬಂದ್ ಗೆ ಕರೆ ಕೊಟ್ಟರೆ ನಾನೇಕೆ ಪಾಲ್ಗೊಳ್ಳಬೇಕು ಎಂದು ಕೇಳಿದ್ದಾರೆ.
ವಾಟಾಳ್ ನಾಗರಾಜ್ ಜೂನ್ ಹನ್ನೆರಡರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ವಿಷಯ ನಿಮಗೆ ಗೊತ್ತೇ ಇದೆ. ಮಹಾರಾಷ್ಟ್ರ ಪರ ಘೋಷಣೆ ಕೂಗಿದ ಎಂಇಎಸ್ ನಾಯಕರನ್ನು ಗಡೀಪಾರು ಮಾಡಬೇಕು ಎಂಬುದು ವಾಟಾಳ್ ನಾಗರಾಜ್ ಅವರ ಒತ್ತಾಯ. ಇಂಥ ಉದ್ದೇಶ ಇರಿಸಿಕೊಂಡು ಕರೆ ನೀಡಿದ ಬಂದ್ ಬಗ್ಗೆ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಗ್ಗೆ ತುಂಬ ಲಘುವಾಗಿ ಪ್ರತಿಕ್ರಿಯೆ ನೀಡಿದ್ದಾರೆ.[ಜೂನ್ 12ರಂದು ಕರ್ನಾಟಕ ಬಂದ್ ಗೆ ಕರೆ: ವಾಟಾಳ್ ನಾಗರಾಜ್]

ಕನ್ನಡ ಭಾಷೆ, ನೆಲ-ಜಲದ ವಿಚಾರವು ಬಂದಾಗ ನಾವೆಲ್ಲ ಒಟ್ಟು ಸೇರಿ ಹೋರಾಟ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯವಿಲ್ಲ. ಆದರೆ ಹೋರಾಟ ನಿಜವಾದ ಕಾಳಜಿಯಿಂದ ಮಾಡುವಂತಹದ್ದಾಗಿರಬೇಕು. ಆಗಷ್ಟೇ ನಾನು ಭಾಗವಹಿಸುತ್ತೇನೆ ಎಂದು ಸಂಸದ ಸುರೇಶ್ ಅಂಗಡಿ ಮಾಧ್ಯಮದವರಿಗೆ ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications