Muharram 2022 : ಮುಸ್ಲಿಂರಿಲ್ಲದಿದ್ದರೂ ಈ ಊರಿನಲ್ಲಿ ಮೊಹರಂ ಆಚರಿಸುತ್ತಾರೆ!
ಬೆಳಗಾವಿ, ಆಗಸ್ಟ್ 8: ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.
ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ 28 ರಂದು ಮುಕ್ತಾಯಗೊಳ್ಳುತ್ತದೆ.
ಹಿರೇಬಿದನೂರು ಗ್ರಾಮದಲ್ಲಿ ಹೆಚ್ಚಾಗಿ ವಾಲ್ಮೀಕಿ ಮತ್ತು ಕುರುಬ ಸಮುದಾಯವರ ಜನಸಂಖ್ಯೆಯಿದೆ. ಎರಡು ಸಮುದಾಯದ ಜನರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಆಚರಿಸುತ್ತದೆ. ಅಲ್ಲಿ 'ಫಕೀರೇಶ್ವರ ಸ್ವಾಮೀಜಿ'ಯ ಗುಡಿ ಇದೆ. ಗ್ರಾಮಸ್ಥರು ವರ್ಣರಂಜಿತ ಲೈಟಿಂಗ್ ಸೆಟ್ಗಳೊಂದಿಗೆ ಬೀದಿಗಳನ್ನು ಬೆಳಗಿಸಿ ಹೆಚ್ಚಿನ ಸಂಖ್ಯೆಯಲ್ಲಿ 'ಫಕೀರೇಶ್ವರ ಸ್ವಾಮಿಯನ್ನು ಪ್ರಾರ್ಥಿಸುತ್ತಾರೆ.

ಸಾಮಾನ್ಯವಾಗಿ ಮಸೀದಿಯಲ್ಲಿ ಪೂಜೆಯನ್ನು ನಡೆಸುವ ಜವಾಬ್ದಾರಿಯನ್ನು ಒಬ್ಬ ಹಿಂದೂ ಪುರೋಹಿತರು ಮಾಡುತ್ತಾರೆ. ಆದಾಗ್ಯೂ, ಇಸ್ಲಾಮಿಕ್ ರೀತಿಯಲ್ಲಿ ಪ್ರಾರ್ಥನೆಗಳನ್ನು ಕೈಗೊಳ್ಳಲು ಗ್ರಾಮಸ್ಥರು ಪ್ರತಿ ವರ್ಷ ಹಬ್ಬದ ಸಮಯದಲ್ಲಿ ನೆರೆಯ ಗ್ರಾಮದ ಮೌಲ್ವಿಯನ್ನು ಒಂದು ವಾರದವರೆಗೆ ಹಬ್ಬಕ್ಕೆ ಆಹ್ವಾನಿಸುತ್ತಾರೆ.

ಮೊದಲ ಮತ್ತು ಕೊನೆಯ ದಿನಗಳಲ್ಲಿ ಮಾಡಲಾಗುವ ಕರ್ಬಲ್ ನೃತ್ಯ, ವಿಶಿಷ್ಟವಾದ ಹಗ್ಗ ಕಲೆ ಮತ್ತು ಬೆಂಕಿಯ ದಾಟುವಿಕೆಯಂತಹ ಐದು ದಿನಗಳ ಆಚರಣೆಯಲ್ಲಿ ಗ್ರಾಮಸ್ಥರು ಫಕೀರೇಶ್ವರ ಸ್ವಾಮಿಯ ಮೆರವಣಿಗೆ ಮಾಡುತ್ತಾರೆ. ಅಲ್ಲದೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ. ಈ ಕ್ಷೇತ್ರದ ಶಾಸಕರು ಇತ್ತೀಚೆಗೆ ಮಸೀದಿ ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಸಲು 8 ಲಕ್ಷ ಮೀಸಲಿಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications