ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶೀಘ್ರ ಬೊಮ್ಮಾಯಿ ಸಂಪುಟ ಸೇರಲಿದ್ದಾರೆ!
ಬೆಂಗಳೂರು, ಅ. 13: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಹೊಸ ಭರವಸೆ ಸಿಕ್ಕಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಚಿವಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಶೀಘ್ರ ಮಂತ್ರಿಸ್ಥಾನದ ಭರವಸೆ ಸಿಕ್ಕಿದೆ. ಜಾರಕಿಹೊಳಿ ಸಹೋದರರೊಂದಿಗೆ ಸಭೆ ಮಾಡುವ ಮೂಲಕ ಗಮನ ಸೆಳೆದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಯಲ್ಲಿ ಉಳಿಸಿಕೊಳ್ಳುವ ಕಸರತ್ತು ಆರಂಭವಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.
ಬುಧವಾರ ಬೆಳಗಾವಿಯ ಕೆಎಲ್ಇ ಕಾಲೇಜು ಆವರಣದಲ್ಲಿ ನಡೆದ ಎನ್ಇಪಿ ಕಾರ್ಯಾಗಾರದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗುಣಗಾನ ಮಾಡಿರುವ ಡಾ. ಅಶ್ವಥ್ ನಾರಾಯಣ ಅವರು, ರಮೇಶ್ ಜಾರಕಿಹೊಳಿಗೆ ಮಂತ್ರಿಸ್ಥಾನದ ಭರವಸೆ ಮೂಡುವಂತೆ ಮಾತನಾಡಿದ್ದಾರೆ.
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಅವರು ಪಕ್ಷಕ್ಕಾಗಿ ತ್ಯಾಗವನ್ನು ಮಾಡಿದ್ದಾರೆ. ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ. ಆ ಮೂಲಕ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿಗೆ ಮಂತ್ರಿಸ್ಥಾನದ ಭರವಸೆ: ಇನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, "ಅವರ ಬಗ್ಗೆ ಪಕ್ಷಕ್ಕೆ ಗೌರವವಿದೆ. ಅವರಿಗೆ ಎದುರಾಗಿರುವ ಸಮಸ್ಯೆ ತಾತ್ಕಾಲಿಕ. ಅದು ನಿವಾರಣೆಯಾದ ಕೂಡಲೇ ಅವರು ಮತ್ತೆ ಸಚಿವ ಸಂಪುಟಕ್ಕೆ ಬರಲಿದ್ದಾರೆ. ಆ ಭರವಸೆಯನ್ನು ಅವರಿಗೆ ಕೊಡಲಾಗಿದೆ. ಹೀಗಾಗಿ ಪಕ್ಷ ಯಾರನ್ನೂ ಕೈಬಿಡುವುದಿಲ್ಲ" ಎಂದು ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದಾರೆ.
ಭಾರತೀಯತೆಯನ್ನು ಒಳಗೊಂಡಿರುವ ಪರಿಪೂರ್ಣ ರಾಷ್ಟ್ರೀಯ ಶಿಕ್ಷಣ ನೀತಿ:
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತೀಯತೆಯನ್ನು ಒಳಗೊಂಡಿರುವ ಪರಿಪೂರ್ಣ ನೀತಿಯಾಗಿದ್ದು, ಗುಣಮಟ್ಟ ಶಿಕ್ಷಣದ ಮೂಲಕ ಭಾರತೀಯರ ಸಬಲೀಕರಣದ ಗುರಿ ಹೊಂದಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಬುಧವಾರ ಬೆಳಗಾವಿಯ ಕೆಎಲ್ಇ ಕಾಲೇಜು ಆವರಣದಲ್ಲಿ ನಡೆದ ಎನ್ಇಪಿ ಕಾರ್ಯಾಗಾರದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ.
"ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾಗತಿಕ ಗುಣಮಟ್ಟದ್ದಾಗಿದೆ. ಇನ್ನು ಮುಂದೆ ಸರಕಾರಿ ಶಾಲೆಗಳು ಕೂಡ ಮಕ್ಕಳನ್ನು ಮೂರನೇ ವರ್ಷಕ್ಕೇ ಸೇರಿಸಿಕೊಳ್ಳಲಿವೆ. ಈ ಮೂಲಕ ಅಲ್ಲೂ ಪೂರ್ವ ಪ್ರಾಥಮಿಕ ಕಲಿಕೆಯನ್ನು ಆರಂಭಿಸಲಾಗುವುದು. ಈ ನೀತಿಯನ್ನು ಐದಾರು ವರ್ಷಗಳ ದೀರ್ಘ ಸಮಾಲೋಚನೆಯ ನಂತರ ಜಾರಿಗೆ ತರಲಾಗುತ್ತಿದೆ" ಎಂದು ಅವರು ವಿವರಿಸಿದ್ದಾರೆ.
ಬೆಳಗಾವಿಯಲ್ಲಿ ಈಗಾಗಲೇ ಇರುವ ಐಟಿ ಪಾರ್ಕ್ಗೆ ಜೀವ ತುಂಬಲಾಗುವುದು. ಜೊತೆಗೆ, ರಕ್ಷಣಾ ಇಲಾಖೆಯ ವಶದಲ್ಲಿರುವ ರಾಜ್ಯ ಸರಕಾರದ 700 ಎಕರೆ ಜಮೀನನ್ನು ಹಿಂತೆಗೆದುಕೊಂಡು, ಅಲ್ಲಿ ಹೊಸ ಐಟಿ ಪಾರ್ಕ್ ಸ್ಥಾಪಿಸಲಾಗುವುದು. ಹಿರೇಬಾಗೇವಾಡಿಯಲ್ಲಿ ನನೆಗುದಿಗೆ ಬಿದ್ದಿರುವ ವಿಶ್ವವಿದ್ಯಾಲಯದ ಕ್ಯಾಂಪಸ್ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಅಶ್ವಥ್ ನಾರಾಯಣ ಭರವಸೆ ನೀಡಿದ್ದಾರೆ.
ಕೋವಿಡ್ ನಂತರ ಡಿಜಿಟಲ್ ಜ್ಞಾನಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಒಬ್ಬೊಬ್ಬ ವ್ಯಕ್ತಿಯೂ ಒಂದೊಂದು ಸಂಸ್ಥೆಯಂತಾಗಿದ್ದಾನೆ. ರಾಜ್ಯ ಸರಕಾರದ 'ಡಿಜಿಟಲ್ ಎಕಾನಮಿ ಮಿಷನ್' ಮತ್ತು 'ಬಿಯಾಂಡ್ ಬೆಂಗಳೂರು' ಯೋಜನೆಗಳ ಮೂಲಕ ರಾಜ್ಯದ ಎಲ್ಲ ಭಾಗಗಳಲ್ಲೂ ಉದ್ದಿಮೆಗಳನ್ನು ಬೆಳೆಸಲಾಗುವುದು ಎಂದು ಅವರು ವಿವರಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications